Advertisement

ಕೇಂದ್ರ ಸರಕಾರದ ಗುಜರಿ ನೀತಿ ಯಥಾವತ್‌ ಜಾರಿಗೆ ಅಧಿಸೂಚನೆ

10:23 PM Aug 04, 2022 | Team Udayavani |

ಬೆಂಗಳೂರು: ಕೇಂದ್ರ ಸರಕಾರ ಘೋಷಿಸಿದ ಮಹತ್ವಾಕಾಂಕ್ಷಿ ವಾಹನಗಳ ಗುಜರಿ ನೀತಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿದ್ದು, ಈ ಸಂಬಂಧ ಈಚೆಗೆ ಅಧಿಸೂಚನೆಯನ್ನು ಹೊರಡಿಸಿದೆ.

Advertisement

2021ರ ಸೆಪ್ಟೆಂಬರ್‌ನಲ್ಲಿ ಘೋಷಿಸಿದ ಉದ್ದೇಶಿತ ನೀತಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ನೀತಿಯ ಜಾರಿ ಮತ್ತು ಸಂಬಂಧಿಸಿದ ಯಾವುದೇ ವಿಚಾರಣೆಗಳಿಗಾಗಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳ ನೇತೃತ್ವದಲ್ಲಿ ಮೇಲ್ಮನವಿ ಪ್ರಾಧಿಕಾರವನ್ನಾಗಿ ಅಧಿಸೂಚಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಶೀಘ್ರದಲ್ಲೇ ನೀತಿ ಜಾರಿ ಕುರಿತಂತೆ ಸರಕಾರ ರಾಜ್ಯಪತ್ರ ಹೊರಡಿಸಲಿದ್ದು, ಅನಂತರದಲ್ಲಿ ಅನುಷ್ಠಾನಗೊಳ್ಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next