Advertisement

ಜನರ ಸಮಸ್ಯೆಗೆ ಸ್ಪಂದಿಸಲು ಸೂಚನೆ

01:19 PM May 24, 2017 | Team Udayavani |

ಜಗಳೂರು: ಕುಡಿಯುವ ನೀರಿನ ಸಮಸ್ಯೆ, ಸ್ಥಗಿತಗೊಂಡಿರುವ ವೃದ್ಯಾಪ ವೇತನ, ಪಾವತಿಯಾಗದ ಬರ ಪರಿಹಾರ, ನಿರ್ಮಿಸಲಾಗಿರುವ ಶೌಚಾಲಯಗಳಿಗೆ ಆಗುತ್ತಿರುವ ಬಿಲ್‌ ವಿಳಂಬ, ಅಳವಡಿಕೆಯಾಗದ ವಿದ್ಯುತ್‌ ಪರಿವರ್ತಕ ಸೇರಿದಂತೆ ಮತ್ತಿತರರ ಸಮಸ್ಯೆಗಳನ್ನು ಬಗೆಹರಿಸುವಂತೆ ಶಾಸಕ ಎಚ್‌.ಪಿ.ರಾಜೇಶ್‌ ಅವರಿಗೆ ಸಾರ್ವಜನಿಕರು ಕೇಳಿಕೊಂಡರು. 

Advertisement

ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯತ್‌ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಶಾಸಕರ ನಡೆ ಹಳ್ಳಿಯ ಅಭಿವೃದ್ಧಿ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ವೈಯಕ್ತಿಕವಾಗಿ ಮತ್ತು ಗ್ರಾಮದಲ್ಲಿ ವಿವಿಧ ಸಮಸ್ಯೆಗಳನ್ನು ಮಂಡಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು. 

ತಾಯಿಟೋಣೆ ಗ್ರಾಮದ ಮಂಜಣ್ಣ ಎಂಬುವರು ಮಾತನಾಡಿ ನಮ್ಮ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಇದೆ. ಟ್ಯಾಂಕರ್‌ ಮೂಲಕ ಪೂರೈಕೆಯಾಗುತ್ತಿದೆ. ನೀರು ನೀಡಿದ ಗುತ್ತಿಗೆದಾರರಿಗೆ ಹಣ ಪಾವತಿಯಾಗಿಲ್ಲ. ಹಣ ಬಿಡುಗಡೆ ಮಾಡುವಂತೆ ಕ್ರಮಕೈಗೊಳ್ಳಬೇಕೆಂದು ಶಾಸಕರಿಗೆ ಮನವಿ ಮಾಡಿದರು.

ಕಳೆದ ಎರಡು ವರ್ಷದ ಹಿಂದೆ ಮಾಸಾಶನಕ್ಕೆ ಅರ್ಜಿ ಸಲ್ಲಿಸಿದ್ದೆ. ಆ ಸಂದರ್ಭದಲ್ಲಿ ನಾಲ್ಕೆ çದು ಸಾವಿರ ಖರ್ಚಾಯಿತು. ಆದರೆ ಆದೇಶ ಕಾμ ಇನ್ನು ನನ್ನ ಕೈ ಸೇರಿಲ್ಲ. ನನಗೆ ಮಾಸಾಶನ ಮಂಜೂರು ಮಾಡುವಂತೆ ತಿಪ್ಪಮ್ಮ ಎಂಬ ವಯೋವೃದ್ಧಿ ಕೋರಿದರು. 

ಹಿರೇಮಲ್ಲನಹೊಳೆ ಗೊಲ್ಲರಹಟ್ಟಿಯ ಅಂಗನವಾಡಿಯಲ್ಲಿ ಗರ್ಭಿಣಿ, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಸರಿಯಾಗಿ ಆಹಾರ ಧಾನ್ಯ ವಿತರಿಸುತ್ತಿಲ್ಲ ಎಂದು ಗ್ರಾಮದ ಮಹಾಲಿಂಗಪ್ಪ ಎಂಬುವರು ದೂರಿದರು. ವಿದ್ಯುತ್‌ ಪರಿವರ್ತಕ ಸುಟ್ಟು ಹದಿನೈದು ದಿನ ಕಳೆದಿದೆ.

Advertisement

ಇದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದ್ದು ಕೇಳದರೆ ಸಂಬಂಧಪಟ್ಟ ಬೆಸ್ಕಾಂ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ತುರ್ತಾಗಿ ವಿದ್ಯುತ್‌ ಪರಿವರ್ತಕವನ್ನು ಅಳವಡಿಸುವಂತೆ ಸೂಚನೆ ನೀಡಬೇಕೆಂದು ಕಮಂಡಲಗೊಂದಿ ಗ್ರಾಮದ ಗ್ರಾಪಂ ಸದಸ್ಯ ಹುಲಿಯಪ್ಪರೆಡ್ಡಿ ಎನ್ನುವರು ಶಾಸಕರಲ್ಲಿ ಮನವಿ ಮಾಡಿದರು.

ಗ್ರಾಪಂ ಪ್ರಬಾರಿ ಪಿಡಿಒ ಮೂಗಣ್ಣ ಅವರಿಗೆ ಎರಡು ಪಂಚಾಯಿತಿಗಳ ಜವಾಬ್ದಾರಿ ನೀಡಲಾಗಿದೆ. ಇದರಿಂದ ಈ ಗ್ರಾಮಪಂಚಾಯಿತಿ ಕೆಲಸ ಕಾರ್ಯಗಳಿಗೆ ಅಡಚಣೆಯಾಗಿದ್ದು ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿಯಲ್ಲಿ ಮಾತ್ರ ಕಾರ್ಯಭಾರ ಮಾಡುವಂತೆ ಆದೇಶ ನೀಡಬೇಕೆಂದು ಕೆಲ ಸಾರ್ವಜನಿಕರು ಅವಲತ್ತುಕೊಂಡರು. 

ಸಾರ್ವಜನಿಕ ಸಮಸ್ಯೆ ಆಲಿಸಿ ಮಾತನಾಡಿದ ಶಾಸಕ ಎಚ್‌.ಪಿ. ರಾಜೇಶ್‌, ಗ್ರಾಮೀಣ ಪ್ರದೇಶದಲ್ಲಿ ಇಂತಹ ಸಮಸ್ಯೆಗಳು ಸಾಕಷ್ಟಿವೆ ಎಂಬುದನ್ನು ತಿಳಿದು ರಾಜ್ಯ ಸರ್ಕಾರ ಶಾಸಕರ ನಡೆದ ಹಳ್ಳಿಯ ಅಭಿವೃದ್ಧಿಯ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಕೂಡಲೇ ಬಗೆಹರಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು. 

ವಿಶೇಷ ಅಭಿವೃದ್ಧಿ ಯೋಜನೆಯಡಿ ಹಿರೇಮಲ್ಲನಹೊಳೆ, 30 ಲಕ್ಷ ರೂ. ಚಿಕ್ಕಮಲ್ಲನಹೊಳೆ 15 ಲಕ್ಷ ರೂ. ಮಲ್ಲಾಪುರ 15 ಲಕ್ಷ ರೂ. ಕಮಂಡಲಗೊಂದಿ 15 ಲಕ್ಷ ರೂ. ಸೇರಿದಂತೆ 75 ಲಕ್ಷದ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಬಹುತೇಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. 

ದಿಬ್ಬದಹಳ್ಳಿ ಬಳಿ 2ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸಿಸಿ ರಸ್ತೆ ನಿರ್ಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಗ್ರಾಪಂ ಅಧ್ಯಕ್ಷ ಶೇಖರಪ್ಪ, ಎಪಿಎಂಸಿ ಸದಸ್ಯ ಎಸ್‌.ಕೆ.ರಾಮರೆಡ್ಡಿ, ಜಿ.ಪಂ. ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ತಹಶೀಲ್ದಾರ್‌ ಶ್ರೀಧರಮೂರ್ತಿ, ತಾಪಂ ಇಒ ಲಕ್ಷಿಪತಿ, ಶಿಶುಭಿವೃದ್ಧಿ ಯೋಜನಾಧಿಕಾರಿ ಭಾರತಿಬಣಕಾರ್‌, ಬೆಸ್ಕಾಂ ಎಇಇ ಸುಧಾಮಣಿ, ಗ್ರಾಪಂ ಸದಸ್ಯರಾದ ತಿಮ್ಮರಾಜ್‌, ಲೋಕೇಶ್‌, ಸೇರಿದಂತೆ ಮತ್ತಿತರರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next