Advertisement

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

01:54 AM Oct 23, 2021 | Team Udayavani |

ಉಡುಪಿ: ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರಿಗೆ ಮರಣೋತ್ತರವಾಗಿ ಘೋಷಣೆಯಾದ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ನ. 8ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ.

Advertisement

ಈ ಕುರಿತು ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಆಹ್ವಾನ ಬಂದಿದೆ. ಶ್ರೀವಿಶ್ವೇಶತೀರ್ಥರು ಧಾರ್ಮಿಕ-ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಸಾಮಾನ್ಯ ಸೇವೆಯನ್ನು ಗುರುತಿಸಿ 2020ರಲ್ಲಿ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಆದರೆ ಕೋವಿಡ್‌ ಕಾರಣದಿಂದ ಪ್ರಶಸ್ತಿ ಪ್ರದಾನ ನಡೆದಿರಲಿಲ್ಲ.

ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಈಗಾಗಲೇ ನಿಗದಿಯಾದಂತೆ ನ. 7ರಂದು ಉಡುಪಿ ಶ್ರೀಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆಯನ್ನು ನಡೆಸಿ ರಾತ್ರಿ ಬೆಂಗಳೂರಿಗೆ ಹೋಗುವರು. ಮರುದಿನ ದಿಲ್ಲಿಗೆ ಹೋಗಿ ಅದೇ ದಿನ ಬೆಂಗಳೂರಿಗೆ ಹಿಂದಿರುಗುವರು. ನ. 13ರಂದು ದಿಲ್ಲಿಯಲ್ಲಿ ನಡೆಯುವ ಅಯೋಧ್ಯೆ ರಾಮಜನ್ಮಭೂಮಿತೀರ್ಥಕ್ಷೇತ್ರ ಟ್ರಸ್ಟ್‌ ಸಭೆಯಲ್ಲಿ ಪಾಲ್ಗೊಳ್ಳುವರು.

ಇದನ್ನೂ ಓದಿ:ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next