Advertisement

ನ. 3: ತಾಲೂಕು ತುಳು ಸಾಹಿತ್ಯ ಸಮ್ಮೇಳನ

03:04 PM Sep 22, 2018 | |

ಮಂಜಲ್ಪಡ್ಪು: ನವೆಂಬರ್‌ 3ರಂದು ಪುತ್ತೂರಿನ ಸುದಾನ ವಿದ್ಯಾ ಸಂಸ್ಥೆಯಲ್ಲಿ ಜರಗುವ ಪುತ್ತೂರು ತಾಲೂಕು ತುಳು ಸಾಹಿತ್ಯ ಸಮ್ಮೇಳನದಲ್ಲಿ ಗ್ರಾಮೀಣ ಆಟಕ್ಕೆ ಹೆಚ್ಚಿನ ಪ್ರಾಧಾನ್ಯ ನೀಡಲಾಗುವುದು. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಿಶ್ರಾಂತ ಕುಲಪತಿ ಬಿ.ಎ. ವಿವೇಕ್‌ ರೈ ವಹಿಸ ಲಿದ್ದು, ಸಚಿವೆ‌ ಡಾ| ಜಯಮಾಲಾ, ಯು.ಟಿ. ಖಾದರ್‌ ಉಪಸ್ಥಿತರಿರುವರು ಎಂದು ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿಯ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ ಹೇಳಿದರು. ಸುದಾನ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸೆ. 21ರಂದು ನಡೆದ ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಎಲ್ಲ ತಾಲೂಕಿನಲ್ಲಿಯೂ ತುಳು ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ತಾಲೂಕು ತುಳು ಸಾಹಿತ್ಯ ಸಮ್ಮೇಳನ ಮಾದರಿಯಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಸಮ್ಮೇಳನದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಿ, ಸಮಿತಿ ಸಂಚಾಲಕರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ತುಳು ಸಾಹಿತ್ಯ, ಸಂಸ್ಕೃತಿ- ರಂಗ ಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಾಧಕರ ಗುರುತಿಸುವಿಕೆ, ತುಳು ಭಾಷೆ ಲಿಖಿತ ಸಾಹಿತ್ಯದ ಜತೆಯಲ್ಲಿ ಮೌಖಿಕ ಸಾಹಿತ್ಯ ಕೂಡ ಜಾನಪದ ಸಾಹಿತ್ಯಕ್ಕೆ ಹೆಚ್ಚಿನ ಪ್ರಾಧಾನ್ಯ ಸಿಗುವ ಅಗತ್ಯವಿದೆ. ತುಳು ಜನಪದ ಸಾಹಿತ್ಯದಲ್ಲಿ ಪಾಡ್ಡನ-ಪಾರಿ, ಉರಲ್‌, ಬೀರ, ಸಂಧಿ ಮೊದಲಾದವುಗಳನ್ನು ಉಳಿಸಿ ಕೊಂಡಿರುವುದು ಗ್ರಾಮೀಣ ಭಾಗದ ಜನರು. ತುಳು ಭಾಷೆಯ ಪ್ರಾಚೀನತೆ, ಹಿರಿಮೆ, ಗರಿಮೆಯನ್ನು ತಿಳಿಸುವ ಲಿಖಿತ ಸಾಹಿತ್ಯಕ್ಕೂ ಮೌಖೀಕ ಸಾಹಿತ್ಯವು ಮೂಲ ಆಕರವಾಗಿ ಸಿಗುತ್ತದೆ. ಇವುಗಳನ್ನೆಲ್ಲವೂ ತೆರೆದಿಡುವ ಕಾರ್ಯ ತುಳು ಸಮ್ಮೇಳನ ದಿಂದ ಆಗಲಿದೆ ಎಂದರು. ತುಳು ಸಮ್ಮೇಳನದ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ನೆಹರೂನಗರ ಸುದಾನ ವಿದ್ಯಾಸಂಸ್ಥೆಯ ವರೆಗೆ ಆಕರ್ಷಕ ಮೆರವಣಿಗೆ ನಡೆಯಲಿದೆ.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಸಮ್ಮೇಳನ ಸ್ವಾಗತ ಸಮಿತಿ ಉಪಾಧ್ಯಕ್ಷ, ಸುದಾನ ವಿದ್ಯಾಸಂಸ್ಥೆಯ ಸಂಚಾಲಕ ವಂ| ವಿಜಯ ಹಾರ್ವಿನ್‌, ನರೇಂದ್ರ ರೈ ದೇರ್ಲ, ಕಾವು ಹೇಮನಾಥ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ್‌ ಎಸ್‌., ಸಮ್ಮೇಳನದ ಆರ್ಥಿಕ ಸಮಿತಿ ಸಂಚಾಲಕ ಶಶಿಕುಮಾರ್‌ ರೈ ಬಾಲ್ಯೊಟ್ಟು, ನಗರಸಭೆ ಸದಸ್ಯ ಜೀವಂಧರ್‌ ಜೈನ್‌, ಕರ್ನಾಟಕ ಸಂಘದ ಅಧ್ಯಕ್ಷ ಪುರಂದರ ಭಟ್‌ ಬರೆಪ್ಪಾಡಿ, ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಬಿ. ಚಂದ್ರಹಾಸ ರೈ, ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ವಿದ್ಯಾ ಉಪಸ್ಥಿತರಿದ್ದರು.

ಪ್ರಾಚ್ಯ ವಸ್ತುಗಳ ಪ್ರದರ್ಶನ ಸಮಿತಿ
ಸಂಚಾಲಕ ಉಮೇಶ್‌ ಸಾಯಿರಾಂ, ಮೆರವಣಿಗೆ ಸಮಿತಿ ಸಂಚಾಲಕ ಅರುಣ್‌ ಕುಮಾರ್‌ ಪುತ್ತಿಲ, ವೇದಿಕೆ ಸಮಿತಿ ಸಂಚಾಲಕ ರಾಕೇಶ್‌ ರೈ ಕೆಡೆಂಜಿ, ಸಂಯೋಜನ ಸಮಿತಿಯ ಕುಂಬ್ರ ದುರ್ಗಾಪ್ರಸಾದ್‌ ರೈ, ಶ್ರೀಧರ್‌ ರೈ ಎಚ್‌., ಸಾಮಗ್ರಿ ಹಂಚಿಕೆ ಸಮಿತಿಯ ಲೋಕೇಶ್‌ ಹೆಗ್ಡೆ, ಕ್ರೀಡಾ ಸಮಿತಿಯ ಪದ್ಮನಾಭ ಶೆಟ್ಟಿ, ರಾಮಣ್ಣ ರೈ, ಸುವಿಚಾರ ಬಳಗದ ಪ್ಯಾಟ್ರಿಕ್‌ ಸಿಪ್ರಿಯನ್‌ ಮಸ್ಕರೇನ್ಹಸ್‌, ಪ್ರೇಮಲತಾ ರಾವ್‌, ಹರಿಣಾಕ್ಷಿ ಜೆ. ಶೆಟ್ಟಿ, ಸುದರ್ಶನ್‌ ನಾೖಕ್‌ ಕಂಪ ಸವಣೂರು, ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್‌ ಕೊಡೆಂಕಿರಿ, ವಿವೇಕಾನಂದ ಪ.ಪೂ. ಕಾಲೇಜಿನ ಪ್ರಾಚಾರ್ಯೆ ಹರಿಣಿ ಪುತ್ತೂರಾಯ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ ಸೀತಾರಾಮ ಕೇವಳ, ಅಬ್ರಾಹಂ ವರ್ಗೀಸ್‌, ಯಕ್ಷಗಾನ ಕಲಾವಿದ ದಾಸಪ್ಪ ರೈ, ಸಾಂದೀಪನಿ ವಿದ್ಯಾಸಂಸ್ಥೆಯ ಜಯಮಾಲ ವಿ.ಎನ್‌., ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್‌ ರೈ ಸಲಹೆ, ಸೂಚನೆ ನೀಡಿದರು. ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ್‌ ರೈ ಸ್ವಾಗತಿಸಿ, ಸ್ವಾಗತ ಸಮಿತಿ ಕೋಶಾಧಿಕಾರಿ ರಾಮಣ್ಣ ಗೌಡ ಗುಂಡೋಳೆ ವಂದಿಸಿದರು.

Advertisement

ಪ್ರಾಚ್ಯ ವಸ್ತುಗಳ ಪ್ರದರ್ಶನ 
ಪುಸ್ತಕ ಪ್ರದರ್ಶನ- ಮಾರಾಟ, ತುಳುನಾಡಿನ ಬದುಕು ಮತ್ತು ಸಂಸ್ಕೃತಿ ಬಿಂಬಿಸುವ ಹಳೆ ವಸ್ತುಗಳ ಪ್ರದರ್ಶನವೂ ಇರಲಿದೆ. ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಸಮ್ಮಾನಿಸಲಾಗುವುದು. ಜತೆಗೆ ಕವಿಗೋಷ್ಠಿ, ಚಾವಡಿ ಪಟ್ಟಾಂಗ, ತುಳು ತಾಳಮದ್ದಳೆ ನಡೆಯಲಿವೆ.

ಜನಪದ ಗೊಬ್ಬುಲು
ಸಮ್ಮೇಳನದ ಅಂಗವಾಗಿ ನಡೆಯುವ ಕ್ರೀಡಾಕೂಟದಲ್ಲಿ ಇತರ ಕ್ರೀಡಾ ಪ್ರಾಧಿಕಾರಗಳಿಂದ ಭಿನ್ನವಾಗಿರುವ ತುಳು ನಾಡಿನ ‘ತುಳುವೆರೆ ಗೊಬ್ಬುಗಳಾದ ಲಗೋರಿ, ಕೊತ್ತಲಿಗೆ ಕ್ರಿಕೆಟ್‌, ಚೆನ್ನೆಮಣೆ ಆಟ, ಹಗ್ಗಜಗ್ಗಾಟ, ಹಾಳೆ ಎಳೆಯುವ ಆಟ, ಟೋಪಿ ಆಟಗಳು ನಡೆಯಲಿವೆ. ತುಳುವರ ಕ್ರೀಡೆಗಳನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಸಮ್ಮೇಳನದಲ್ಲಿ ‘ತುಳುವೆರೆ ಗೊಬ್ಬುಲು’ ಎಂಬ ಪರಿಕಲ್ಪನೆಯನ್ನು ಪರಿಚಯಿಸುವ ಪ್ರಯತ್ನ ತುಳು ಸಮ್ಮೇಳನದ್ದು.

Advertisement

Udayavani is now on Telegram. Click here to join our channel and stay updated with the latest news.

Next