Advertisement

ಸಿಬಿಐ ಹಂಗಾಮಿ ಮುಖ್ಯಸ್ಥ ಯಾವುದೇ ನಿರ್ಧಾರ ಕೈಗೊಳ್ಳಕೂಡದು: ಸುಪ್ರೀಂ

11:38 AM Oct 26, 2018 | Team Udayavani |

ಹೊಸದಿಲ್ಲಿ : ಸಿಬಿಐ ಹಂಗಾಮಿ ಮುಖ್ಯಸ್ಥ ಎಂ ನಾಗೇಶ್ವರ ರಾವ್‌ ಅವರು ಯಾವುದೇ ಪ್ರಮುಖ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ. ಅಕ್ಟೋಬರ್‌ 23ರಿಂದ ಈ ತನಕ ಅವರು ತೆಗೆದುಕೊಂಡಿರಬಹುದಾದ ಯಾವುದೇ ನಿರ್ಧಾರಗಳನ್ನು ಅನುಷ್ಠಾನಿಸಕೂಡದು ಎಂದು ಸುಪ್ರೀಂ ಕೋರ್ಟ್‌ ಇಂದು ಶುಕ್ರವಾರ ಹೇಳಿದೆ.

Advertisement

ಸಿಬಿಐ ವಿರುದ್ಧದ ಸಿಬಿಐ ಕದನ ಕುರಿತ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನ.12ಕ್ಕೆ ನಿಗದಿಸಿ ಆದೇಶ ಹೊರಡಿಸಿದೆ. 

ಅಸ್ಥಾನ ಸುಪ್ರೀಂ ಕೋರ್ಟಿಗೆ, ಬಿಗಿ ಭದ್ರತೆ

ರಾಷ್ಟ್ರ ರಾಜಧಾನಿಯಲ್ಲಿ ಸಿಬಿಐ ವರ್ಸಸ್‌ ಸಿಬಿಐ ಕದನ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿರುವಂತೆಯೇ ಇದೀಗ ದಿಲ್ಲಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 

ಆಲೋಕ್‌ ವರ್ಮಾ ಬಳಿಕ ಇದೀಗ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಅಸ್ಥಾನ ಕೂಡ ತನ್ನ ವಿರುದ್ದದ ಸರಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದಾರೆ. 

Advertisement

ಸಿಬಿಐ ನಿರ್ದೇಶಕ ಆಲೋಕ್‌ ವರ್ಮಾ ಅವರು ಈಗಾಗಲೇ ಸರಕಾರ ತನ್ನ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ತನ್ನನ್ನು ಬಲವಂತದ ರಜೆಯ ಮೇಲೆ ಕಳುಹಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಪ್ರವೇಶಿಸಿದ್ದಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳ ತನಿಖೆಯ ಹೊಣೆ ಹೊತ್ತಿರುವ ಸಿಬಿಐ ನ ಅನೇಕ ಅಧಿಕಾರಿಗಳನ್ನು  ಸರಕಾರ ವರ್ಗಾಯಿಸಿರುವುದು ಸಿಬಿಐ ಕಾರ್ಯಕ್ಷಮತೆಗೆ ಸವಾಲಾಗಿ ಪರಿಣಮಿಸಿದೆ ಎಂದು ವರ್ಮಾ ಆರೋಪಿಸಿದ್ದಾರೆ. 

ಇದೇ ವೇಳೆ ಸಿಬಿಐ ಉನ್ನತ ಅಧಿಕಾರಿಗಳ ವಿರುದ್ದದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ  ಸರಕಾರೇತರ ಸೇವಾ ಸಂಸ್ಥೆ “ಕಾಮನ್‌ ಕಾಸ್‌’ ಸಲ್ಲಿಸಿರುವ ಅರ್ಜಿ ಕೂಡ ಸುಪ್ರೀಂ ಕೋರ್ಟ್‌ ಮುಂದೆ ವಿಚಾರಣೆಗೆ ಇದೆ. 

ಇದೇ ವೇಳೆ ಕಾಂಗ್ರೆಸ್‌ ಮುಖ್ಯಸ್ಥ ರಾಹುಲ್‌ ಗಾಂಧಿ ಅವರು ಆಲೋಕ್‌ ವರ್ಮಾ ಅವರನ್ನು ಮತ್ತೆ ಹುದ್ದೆಯಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ ದೇಶಾದ್ಯಂತದ ಎಲ್ಲ ಸಿಬಿಐ ಕಾರ್ಯಾಲಯಗಳ ಎದುರು ತಮ್ಮ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್‌ ಕೂಡ ಈ ವಿಷಯದಲ್ಲಿ ಕಾಂಗ್ರೆಸ್‌ ಜತೆಗೆ ಸೇರಿಕೊಂಡಿದೆ. 

ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾಗಿರುವ ಸಿಬಿಐ ನ ಘನತೆ ಮತ್ತು ವಿಶ್ವಾಸಾರ್ಹತೆಯನ್ನು ನಾಶ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಂದೆ ಕ್ಷಮೆಯಾಚಿಸಬೇಕು ಎಂದು ವಿಪಕ್ಷಗಳು ಒಟ್ಟಾಗಿ ಆಗ್ರಹಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next