Advertisement

BJP: ವರಿಷ್ಠರ ಜತೆ ಮಾತಾಡಲು ಈಗ ಕಾಲ ಪಕ್ವವಾಗಿದೆ- ವಿ. ಸೋಮಣ್ಣ

11:31 PM Dec 16, 2023 | Team Udayavani |

ಮೈಸೂರು: ಪಕ್ಷದ ವರಿಷ್ಠರ ಜತೆ ಮಾತಾ ಡಲು ಈಗ ಕಾಲ ಪಕ್ವವಾಗಿದೆ. ಡಿ.19ರ ಬಳಿಕ ನಾವು ನಾಲ್ಕೈದು ಮಂದಿ ವರಿಷ್ಠರನ್ನು ಭೇಟಿ ಮಾಡುತ್ತೇವೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. 22ರೊಳಗೆ ವರಿಷ್ಠರನ್ನು ಭೇಟಿ ಮಾಡಿ ಎಲ್ಲ ವಿಚಾರ ಗಳನ್ನೂ ಚರ್ಚಿಸುತ್ತೇನೆ. ವರಿಷ್ಠರು ಏನು ಹೇಳು ತ್ತಾರೋ ಹಾಗೆ ನಡೆದುಕೊಳ್ಳುತ್ತೇನೆ ಎಂದರು.

ಕಾರ್ತಿಕ ಮಾಸ ಮುಗಿದು ಈಗ ಧನುರ್ಮಾಸ ಆರಂಭವಾಗುತ್ತಿದೆ ಎಂದು ಮಾರ್ಮಿಕವಾಗಿ ನುಡಿದ ಸೋಮಣ್ಣ, ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಬಂದ ಬಳಿಕ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದರು. ಕೆಲವು ಬಿಜೆಪಿ ನಾಯಕರ ಸೋಲಿಗೆ ಯಾರು ಕಾರಣ ಎಂಬ ಬಗ್ಗೆ ನೇರವಾಗಿ ಹೇಳದ ಸೋಮಣ್ಣ, ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಏನು ಕಾರಣ ಎಂದು ಎಲ್ಲರಿಗೂ ಗೊತ್ತಿದೆ. ಪದೇಪದೆ ಅದೇ ವಿಚಾರವನ್ನು ಮಾತನಾಡುವುದು ಬೇಡ ಎಂದು ಹೇಳಿದರು.

ನಾನು ಲೋಕಸಭಾ ಚುನಾವಣೆ ಟಿಕೆಟ್‌ ಆಕಾಂಕ್ಷಿಯಲ್ಲ. ಆದರೆ ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ ಎಂದರು.

ಕಾಂಗ್ರೆಸ್‌ ಸೇರುತ್ತಾರೆಂದು ಅರ್ಥವಲ್ಲ
ಕಾಂಗ್ರೆಸ್‌ ಶಾಸಕರಿಗೆ ಆಯೋಜಿಸಿದ್ದ ಔತಣಕೂಟ ದಲ್ಲಿ ಬಿಜೆಪಿಯ ಕೆಲವು ಶಾಸಕರು ಭಾಗಿಯಾಗಿ ರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಸ್‌.ಟಿ. ಸೋಮಶೇಖರ್‌, ಶಿವರಾಮ ಹೆಬ್ಟಾರ್‌ಗೆ ಔತಣ ಕೂಟಕ್ಕೆ ಆಹ್ವಾನ ನೀಡಿದ್ದರು. ಹಾಗಾಗಿ ಅವರು ಹೋಗಿದ್ದಾರೆ. ಇಬ್ಬರೂ ಈ ಮೊದಲು ಕಾಂಗ್ರೆಸ್‌ನಲ್ಲಿ ದ್ದವರು. ಊಟಕ್ಕೆ ಹೋದಾಕ್ಷಣ ಅವರು ಕಾಂಗ್ರೆಸ್‌ಗೆ ಹೋಗುತ್ತಾರೆಂದು ಅರ್ಥವಲ್ಲ ಎಂದರು.

Advertisement

ಬಿಜೆಪಿ ತೊರೆಯುತ್ತೀರಾ ಎಂಬ ಪ್ರಶ್ನೆಗೆ, ಎಲ್ಲದಕ್ಕೂ ಕಾಲ ಕೂಡಿ ಬರಬೇಕು. ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವ ಮೂಲಕ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next