Advertisement

ಈಗ ಪ್ರಧಾನಿ ಮೋದಿಗೆ ಮನವರಿಕೆಯಾಗಿದೆ: ದೇವೇಗೌಡರ ಪ್ರತಿಕ್ರಿಯೆ ಏನು?

05:03 PM Dec 11, 2018 | Team Udayavani |

ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದ ರಭಸದಲ್ಲಿ ಕಾಂಗ್ರೆಸ್ ಮುಕ್ತ ಎಂದಿದ್ದರು. ಆದರೆ ಪ್ರಾದೇಶಿಕ ಪಕ್ಷಗಳನ್ನು ನಾಶ ಮಾಡಲು ಸಾಧ್ಯವಿಲ್ಲ. ಅದಕ್ಕೆ ಮಿಜೋರಾಂ, ತೆಲಂಗಾಣ ವಿಧಾನಸಭಾ ಫಲಿತಾಂಶವೇ ಸಾಕ್ಷಿ. ಪ್ರಾದೇಶಿಕ ಪಕ್ಷಗಳ ಹೊರತಾದ ರಾಜಕಾರಣ ರಾಷ್ಟ್ರಮಟ್ಟದಲ್ಲಿ ಅಸಾಧ್ಯ.ಎಂದು ಜೆಡಿಎಸ್ ರಾಷ್ಟ್ರೀಯ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Advertisement

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರು ಮೈತ್ರಿ ನಾಯಕತ್ವ ವಹಿಸಬೇಕಾಗಿದೆ. ರಾಹುಲ್ ಗಾಂಧಿ ಅವರ ಸಾಧನೆ ಕಡೆಗಣಿಸುವಂತಿಲ್ಲ ಎಂದರು.

ಕಾಂಗ್ರೆಸ್ ಮುಕ್ತ ಹಾಗೂ ಪ್ರಾದೇಶಿಕ ಪಕ್ಷಗಳ ನಾಶ ಸಾಧ್ಯವಿಲ್ಲ ಎಂಬುದು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆಯಾಗಿದೆ. ಈಗಲೇ ಲೋಕಸಭೆ ಚುನಾವಣೆ ಬಗ್ಗೆ ಹೇಳಲಾಗದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next