Advertisement

ಪ.ಬಂಗಾಳದಲ್ಲೂ ಎನ್ ಆರ್ ಸಿ ಬರಲಿ: ಬಬುಲ್ ಸುಪ್ರಿಯೋ

09:11 AM Sep 28, 2019 | keerthan |

ಕೊಲ್ಕತ್ತಾ: ಅಕ್ರಮ ವಲಸಿಗರ ಪತ್ತೆ ಹಚ್ಚುವ ಸಲುವಾಗಿ ಪಶ್ಚಿಮ ಬಂಗಾಳದಲ್ಲೂ ರಾಷ್ಟ್ರೀಯ ನಾಗರಿಕರ ನೋಂದಣಿ ( ಎನ್ ಆರ್ ಸಿ) ಜಾರಿಗೆ ಬರಬೇಕೆಂದು ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಹೇಳಿದ್ದಾರೆ.

Advertisement

ಮೂಲ ಭಾರತೀಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಅಕ್ರಮ ವಲಸಿಗರಿಗೆ ಕಡಿವಾಣ ಹಾಕಲು ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಪಶ್ಚಿಮ ಬಂಗಾಳದಲ್ಲೂ ಅನುಷ್ಠಾನಕ್ಕೆ ತರಬೇಕು. ಮತ್ತು ಇದನ್ನು ಜಾರಿಗೊಳಿಸುವ ಧೈರ್ಯ ಮೋದಿ ಸರಕಾರಕ್ಕಿದೆ ಎಂದು ಕೇಂದ್ರ ಸಚಿವರು ಅಭಿಪ್ರಾಯ ಪಟ್ಟರು.

ಎನ್ ಆರ್ ಸಿ ಬಗ್ಗೆ ಜನರಿಗೆ ತಪ್ಪು ಮಾಹಿತಿಯನ್ನು ಹಬ್ಬುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬಬುಲ್ ಸುಪ್ರಿಯೋ ತರಾಟೆಗೆ ತೆಗೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next