Advertisement

ಎನ್‌ಆರ್‌ಸಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

12:30 AM Feb 06, 2019 | |

ಹೊಸದಿಲ್ಲಿ: ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆಯಲು ಕೇಂದ್ರ ಸರಕಾರ ಅನುವು ಮಾಡುತ್ತಿಲ್ಲ ಎಂದು ಸುಪ್ರೀಂ ಮಂಗಳವಾರ ತೀವ್ರ ಟೀಕೆ ವ್ಯಕ್ತಪಡಿಸಿದೆ. ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಯು ಚುನಾವಣೆ ಕರ್ತವ್ಯದಲ್ಲಿ ನಿರತವಾಗುವುದರಿಂದ 2 ವಾರಗಳವರೆಗೆ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾ ಲಯ ಆಗ್ರಹಿಸಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌, ಎನ್‌ಆರ್‌ಸಿ ಪ್ರಕ್ರಿಯೆಯ ಜು. 31ರ ಅಂತಿಮ ದಿನಾಂಕವನ್ನು ಮುಂದೂಡಲಾಗದು ಎಂದಿದೆ. ಇದೇ ವೇಳೆ, ಕೇಂದ್ರವು ನಿಗದಿತ ದಿನಾಂಕದೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಬದ್ಧವಾಗಿದೆ ಎಂದು ರಾಜನಾಥ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next