Advertisement

NSUI ಸಂಘಟನೆಯಿಂದ ಎಬಿವಿಪಿ ಅಧ್ಯಕ್ಷನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ

01:45 PM Jun 17, 2023 | Shreeram Nayak |

ತೀರ್ಥಹಳ್ಳಿ : 16ರಂದು ವಾಟ್ಸಪ್ ಗ್ರೂಫ್‌ಗಳಲ್ಲಿ ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜು ಯುವತಿಯರ ಅಶ್ಲೀಲ ನಗ್ನ ಚಿತ್ರಗಳನ್ನು ಹರಿಬಿಡಲಾಗಿದ್ದು, ವಿಡಿಯೋದಲ್ಲಿ ಎ.ಬಿ.ವಿ.ಪಿ ವಿಧ್ಯಾರ್ಥಿ ಸಂಘಟನೆಯ ತೀರ್ಥಹಳ್ಳಿ ಘಟಕದ ಅಧ್ಯಕ್ಷನೂ ಕೂಡ ಇದ್ದು ಆತನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಎನ್ ಎಸ್ ಯು ಐ ಸಂಘಟನೆ ವತಿಯಿಂದ ಇಂದು ಡಿವೈಎಸ್ ಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

Advertisement

ಸಂಘಟನೆಗೆ ಸದಸ್ಯತ್ವ ಆಮಿಷ ತೋರಿಸಿ, ವೀಡಿಯೋ ಮಾಡಿ ದೇಹದ ನಗ್ನ ದೃಶ್ಯಗಳನ್ನು ಅಶ್ಲೀಲವಾಗಿ ಚಿತ್ರಿಸಿ ವೈರಲ್ ಮಾಡುವ ಬೆದರಿಕೆ ಒಡ್ಡಿ ಬ್ಲಾಕ್‌ಮೇಲ್ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ
ಕಂಡುಬಂದಿದೆ. ಇದೊಂದು ಸಮಾಜ ತಲೆತಗ್ಗಿಸುವ ಪ್ರಕರಣವಾಗಿದ್ದು ತಾವು ಸ್ವಯಂ ದೂರು
ದಾಖಲಿಸಿಕೊಂಡು ತನಿಖೆ ನೆಡಸಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ.

ಈ ರೀತಿಯ ಪ್ರಕರಣ ಮುಂದುವರೆದರೆ ಮರ್ಯಾದಸ್ಥ ಕುಟುಂಬದ ಹೆಣ್ಣುಮಕ್ಕಳು ಶಾಲಾ ಕಾಲೇಜುಗಳಿಗೆ ಬರುವುದು ಕಷ್ಟ ಸಾಧ್ಯವಾಗಲಿದ್ದು ಪೋಲೀಸ್ ಇಲಾಖೆ ಪ್ರಭಾವಿಗಳ ಪ್ರಭಾವಕ್ಕೆ ಮಣಿಯದೇ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ಕೋರಿಕೊಳ್ಳುತ್ತೇವೆ ಎಂದು ಎನ್ ಎಸ್ ಯು ಐ ಸಂಘಟನೆಯಿಂದ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಅಮರಾನಾಥ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ಸುಜಿತ್ ಸಾಲಿಯನ್, ಅಶ್ವಲ್ ಗೌಡ ಶರತ್ ಮಾಳೂರು ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next