Advertisement

ಮೋಹನದಾಸ್‌ ಪೈ ಅವರಿಗೆ ನುಡಿನಮನ

11:19 PM Aug 11, 2022 | Team Udayavani |

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ನಡೆದ ಡಾ| ಯು.ಪಿ. ಉಪಾಧ್ಯಾಯ-ಡಾ| ಸುಶೀಲಾ ಪಿ. ಉಪಾಧ್ಯಾಯ ಪ್ರಶಸ್ತಿ ಹಾಗೂ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಣಿಪಾಲ ವಿ.ವಿ.ಯ ಸಾಂಸ್ಕೃತಿಕ ಸಂಸ್ಥೆಗಳ ಅಧ್ಯಕ್ಷ ರಾಗಿದ್ದ ಟಿ. ಮೋಹನದಾಸ್‌ ಪೈ ಅವರಿಗೆ ನುಡಿನಮನ ಸಲ್ಲಿಸಲಾಯಿತು.

Advertisement

ಪ್ರಶಸ್ತಿ ಪುರಸ್ಕೃತರಾದ ಡಾ| ಎಸ್‌.ಆರ್‌. ವಿಘ್ನರಾಜ್‌, ಡಾ| ರತ್ನಾಕರ ಸಿ. ಕುನುಗೋಡು, ವಿಮರ್ಶಕ ಪ್ರೊ| ಮುರಳೀಧರ ಉಪಾಧ್ಯ, ಕಾಂತಾವರ ಕನ್ನಡ ಸಂಘದ ಡಾ| ನಾ. ಮೊಗಸಾಲೆ, ಉಜಿರೆ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ| ಬಿ.ಪಿ. ಸಂಪತ್‌ ಕುಮಾರ್‌, ವಿಶ್ರಾಂತ ಪ್ರಾಧ್ಯಾಪಕ ಡಾ| ನರಸಿಂಹಮೂರ್ತಿ ಆರ್‌., ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಕನ್ನಡ ವಿಭಾಗದ ಮುಖ್ಯಸ್ಥ ಡಾ| ಪುತ್ತಿ ವಸಂತ ಕುಮಾರ್‌, ಉಪನ್ಯಾಸಕ ರಾಘವೇಂದ್ರ ತುಂಗ, ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್‌ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next