Advertisement

ರಾಜ್ಯ ಒಕ್ಕಲಿಗರ ಸಂಘದಿಂದ ಮಂಡ್ಯದಲ್ಲಿ ನರ್ಸಿಂಗ್ ಕಾಲೇಜು, ಆಸ್ಪತ್ರೆ

06:31 PM Sep 01, 2022 | Team Udayavani |

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘವು ಹೊಸದಾಗಿ ಮಂಡ್ಯದಲ್ಲಿ ನರ್ಸಿಂಗ್ ಕಾಲೇಜು ಮತ್ತು ನೂರು ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ಶ್ರೀಗಂಧದ ಕಾವಲ್ ನಲ್ಲಿ ನರ್ಸಿಂಗ್ ಕಾಲೇಜು ಹಾಗೂ ಆಯುರ್ವೇದ ಕಾಲೇಜು ಪ್ರಾರಂಭಿಸಲು ತೀರ್ಮಾನಿಸಿದೆ.

Advertisement

ಶ್ರೀಗಂಗಧದ ಕಾವಲ್ ನಲ್ಲಿರುವ ಕೆಂಗಲ್ ಹನುಮಂತಯ್ಯ ಆಸ್ಪತ್ರೆಯನ್ನು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್.ಬಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಡಳಿತ ಮಂಡಳಿಯ ಒಪ್ಪಿಗೆಯಂತೆ ಆಯುರ್ವೇದ ಕಾಲೇಜು ಹಾಗೂ ಪ್ಯಾರಾ ಮೆಡಿಕಲ್ ಕೋರ್ಸ್ ಪ್ರಾರಂಭಿಸಲಾಗುವುದು.ನರ್ಸಿಂಗ್ ಕಾಲೇಜುಗಳು, ಆಯುರ್ವೇದ ಕಾಲೇಜು ಹೊಸದಾಗಿ ಪ್ರಾರಂಭಿಸುವುದರ ಜತೆಗೆ ಕೆಂಗಲ್ ಹನುಮಂತಯ್ಯ ಆಸ್ಪತ್ರೆ ಪ್ರಾರಂಭ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ.

ಶೀಘ್ರದಲ್ಲೇ ಸಂಘದಿಂದ ಆಡಳಿತ ಮಂಡಳಿ ಒಪ್ಪಿಗೆ ನೀಡಿರುವ ಕಾಲೇಜು ಹಾಗೂ ಆಸ್ಪತ್ರೆ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next