Advertisement

ಬ್ರಿಟನ್‌ ಆರೋಗ್ಯ ಇಲಾಖೆಗೆ 1 ಸಾವಿರ ನರ್ಸಿಂಗ್‌ ಸಿಬಂದಿ

04:24 PM May 31, 2021 | Team Udayavani |

ಬೆಂಗಳೂರು: ಬ್ರಿಟನ್‌ ದೇಶದ ರಾಷ್ಟ್ರೀಯಆರೋಗ್ಯ ಇಲಾಖೆ ಯಿಂದ 1,000 ಶುಶ್ರೂಷಕರಿಗೆ ಬೇಡಿಕೆ ಬಂದಿದ್ದು, ಕೋವಿಡ್‌ಸಂಕಷ್ಟ ಮುಗಿದ ನಂತರ ಅಷ್ಟೂ ನರ್ಸಿಂಗ್‌ ಸಿಬ್ಬಂದಿಯನ್ನು ಲಂಡನ್‌ಗೆ ಕಳಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

Advertisement

ವರ್ಚುಯಲ್‌ ವೇದಿಕೆ ಮೂಲಕ ಭಾನುವಾರ ವಿಶ್ವ ಕನ್ನಡ ಶುಶ್ರೂಷಕರ ಸಂಘದಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಈಗಾಗಲೇ ಕೌಶಲ್ಯಾಭಿವೃದ್ಧಿಇಲಾಖೆ ಮತ್ತು ಎನ್‌ಎಚ್‌ಎಸ್‌ ಜತೆಒಪ್ಪಂದಕ್ಕೆ ಸಹಿ ಬಿದ್ದಿದೆ ಎಂದರು.1,000 ಶುಶ್ರೂಷಕರನ್ನು ಕಳಿಸುವಂತೆಅವರು ಕೋರಿದ್ದಾರೆ.

ಅದಕ್ಕೆ ಈಗಾಗಲೇವ್ಯವಸ್ಥೆ ಮಾಡಲಾಗಿದ್ದು, ಅಲ್ಲಿನ ವ್ಯವಸ್ಥೆಗೆ ಒಗ್ಗಿಕೆಲಸ ಮಾಡುವುದಕ್ಕೆ ಅಗತ್ಯವಾದ ಭಾಷೆ,ಸಂವಹನ ಕಲೆ, ಸೇವಾ ಮನೋಭಾವಇತ್ಯಾದಿಗಳ ಬಗ್ಗೆ ಎಲ್ಲರಿಗೂ ತರಬೇತಿನೀಡಲಾಗುವುದು ಎಂದು ತಿಳಿಸಿದರು.ಇನ್ನೂ ಹೆಚ್ಚಿನ ನರ್ಸಿಂಗ್‌ ಸಿಬ್ಬಂದಿ ಅಗತ್ಯವಿದ್ದರೆ ಕಳಿಸಲಾಗುವುದು. ಅಲ್ಲದೆ ಬ್ರಿಟನ್‌ಜತೆಗೆ ಇತರೆ ದೇಶಗಳಿಗೂ ನರ್ಶಂಗ್‌ ಹಾಗೂಅರೆವೈದ್ಯಕೀಯ ಸಿಬ್ಬಂದಿಯನ್ನು ಒದಗಿಸುವಕೆಲಸ ಮಾಡಲಾಗುತ್ತಿದೆ.

ಈ ಬಗ್ಗೆಕೌಶಲ್ಯಾಭಿವೃದ್ಧಿ ಇಲಾಖೆ ಕೆಲಸ ಮಾಡುತ್ತಿದೆಎಂದು ಹೇಳಿದರು. ನರ್ಸಿಂಗ್‌ ಸಿಬ್ಬಂದಿಗೆಅಧಿಕಾರಿ ಮಟ್ಟದ ಸ್ಥಾನಮಾನ ನೀಡುವ ಬಗ್ಗೆಈಗಾಗಲೇ ನಿರ್ಧಾರವಾಗಿದ್ದು,ಮುಖ್ಯಮಂತ್ರಿ ಯಡಿಯೂರಪ್ಪ ಅವರುಆದೇಶವನ್ನೂ ಹೊರಡಿಸಿದ್ದಾರೆ. ಅಲ್ಲದೆ, ಅವರಎಲ್ಲ ಬೇಡಿಕೆಗಳನ್ನೂ ಈಡೇರಿಸಲಾಗಿದೆ.ಜತೆಗೆ, ಇದು ದೇಶಾದ್ಯಂತ ಸುಮಾರು 2 ಲಕ್ಷನರ್ಸಿಂಗ್‌ ಸಿಬ್ಬಂದಿಗೆ ಆರೋಗ್ಯ ಕೇಂದ್ರಗಳಲ್ಲಿ ಉದ್ಯೋಗವನ್ನು ಕೊಡಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ವಿವರಿಸಿದರು.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸಾನ್ನಿಧ್ಯವಹಿಸಿ “ವಿಶ್ವ ಕನ್ನಡ ಶುಶ್ರೂಷಕರ ಸಂಘವನ್ನುಉದ್ಘಾಟಿಸಿ ಆಶೀರ್ವಚನ ನೀಡಿದರು.ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವಎಂ.ಬಿ.ಪಾಟೀಲ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು, ಗೋಪಾಲ ಕುಲ ಕರ್ಣಿ,ಸಂಘದ ಅಧ್ಯಕ್ಷ ತಮ್ಮಣ್ಣ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next