Advertisement

ಅಡಿಕೆ; ಅಫಿದವಿತ್‌ ವಾಪಸಿಗೆ ಕ್ರಮ: ಸಚಿವ ಹರ್ಷವರ್ಧನ್‌

01:08 AM Jul 18, 2019 | Team Udayavani |

ಮಂಗಳೂರು: ಅಡಿಕೆಯು ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯುಪಿಎ ಸರಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿದವಿತ್‌ ಹಿಂದಕ್ಕೆ ಪಡೆಯುವ ಬಗ್ಗೆ ವಿಶೇಷ ಪ್ರಯತ್ನ ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಹರ್ಷವರ್ಧನ್‌ ಭರವಸೆ ನೀಡಿದ್ದಾರೆ.

Advertisement

ಈ ಅಫಿದವಿತ್‌ ಅನ್ನು ಉಲ್ಲೇಖ ಮಾಡಿ ಇತ್ತೀಚೆಗೆ ಲೋಕಸಭೆಯಲ್ಲಿ ಸಚಿವರು ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ, ಸಂಸದ ನಳಿನ್‌ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಅಡಿಕೆಯಿಂದ ದುಷ್ಪರಿಣಾಮ ಇಲ್ಲ ಎಂದು ವಿವರಿಸಿದರು. ಜತೆಗೆ ಕೇಂದ್ರ ತೋಟ ಬೆಳೆಗಳ ಸಂಶೋಧನ ಸಂಸ್ಥೆಯ ಅಧ್ಯಯನ ವರದಿಯ ಮಾಹಿತಿಯನ್ನು ಸಚಿವರ ಗಮನಕ್ಕೆ ತರಲಾಗಿದೆ.

ಈ ಬಗ್ಗೆ ಸ್ಪಂದಿಸಿದ ಸಚಿವರು ಅಫಿದವಿತ್‌ ಹಿಂಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ನಿಯೋಗದಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ, ಜಿ.ಎಂ. ಸಿದ್ದೇಶ್ವರ್‌, ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next