Advertisement

ಅಡಿಕೆ ಕಲಬೆರಕೆ: ಪರಿಶೀಲನೆ, ಕಠಿನ ಕ್ರಮಕ್ಕೆ ಸಿಎಂ ಸೂಚನೆ

02:25 AM Apr 30, 2019 | sudhir |

ವಿಟ್ಲ: ವಿದೇಶದಿಂದ ಕಳಪೆ ದರ್ಜೆಯ ಅಡಿಕೆಯನ್ನು ಕಡಿಮೆ ಬೆಲೆಗೆ ಆಮದು ಮಾಡಿ, ಅದನ್ನು ಕರಾವಳಿಯ ಉತ್ತಮ ಗುಣಮಟ್ಟದ ಅಡಿಕೆ ಜತೆ ಕಲಬೆರಕೆ ಮಾಡುತ್ತಿರುವ ಬಗ್ಗೆ “ಉದಯವಾಣಿ’ಯಲ್ಲಿ ಪ್ರಕಟವಾದ ವರದಿಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ಉಡುಪಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ವರದಿಯನ್ನು ಗಮನಿಸಿ, ಇದು ಗಂಭೀರ ವಿಷಯವಾಗಿದ್ದು, ಜಿಲ್ಲಾಧಿಕಾರಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಪರಿಶೀಲಿಸಲು ಸೂಚನೆ ನೀಡಿದ್ದಾರೆ. ಒಂದೆರಡು ದಿನಗಳಲ್ಲಿ ಕಠಿನ ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ ಎಂಬುದಾಗಿ ದ.ಕ. ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಬಿ. ಮೊಹಮ್ಮದ್‌ ಕುಂಞಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕ್ರಮ ಕೈಗೊಳ್ಳಲು ಮನವಿ
ದ.ಕ. ಜಿಲ್ಲೆಯ ವಿಟ್ಲ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮೊದಲಾದ ಕಡೆ ಕೊಳೆರೋಗ, ಹಳದಿ ರೋಗದಿಂದ ತತ್ತರಿಸುತ್ತಿರುವ ಬೆಳೆಗಾರರಿಗೆ ಅಡಿಕೆ ಕಲಬೆರಕೆಯಿಂದ ಅಪಾಯ ಎದುರಾಗಿದ್ದು, ಕಂಗಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದೇಶೀ ಒಪ್ಪಂದಗಳನ್ನು ದುರುಪಯೋಗಪಡಿಸಿ, ದಂಧೆಕೋರರು ನೇಪಾಲ, ಶ್ರೀಲಂಕಾ, ಬಾಂಗ್ಲಾ ದೇಶದ ಮೂಲಕ ಬರ್ಮಾ, ಇಂಡೋನೇಶ್ಯಾದಲ್ಲಿ ಬೆಳೆಯುವ ಕಳಪೆ ದರ್ಜೆಯ ಅಡಿಕೆಯನ್ನು ತಂದು ಇಲ್ಲಿನ ಉತ್ತಮ ಅಡಿಕೆಯ ಜತೆಗೆ ಮಿಶ್ರ ಮಾಡುತ್ತಿದ್ದಾರೆ. ಇದರಿಂದಾಗಿ ಕರಾವಳಿಯ ಉತ್ತಮ ಅಡಿಕೆ ಬೆಳೆಗಾರರಿಗೆ ಭಾರೀ ನಷ್ಟ ಉಂಟಾಗುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮೊಹಮ್ಮದ್‌ ಕುಂಞಿ, ರಾಜ್ಯ ಉಪಾಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಎಂ.ಬಿ. ಸದಾಶಿವ, ದಯಾಕರ ಆಳ್ವ ಅವರ ನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇ ಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next