Advertisement

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

07:23 PM Sep 19, 2024 | Team Udayavani |

ದಾವಣಗೆರೆ: ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿ ಗ್ರಾಮದಲ್ಲಿ ಬುಧವಾರ ಮರಳಿನ ವಿಚಾರವಾಗಿ ನಡೆದ ಒಬ್ಬರ ಕೊಲೆ, ಮತ್ತೊಬ್ಬನಿಗೆ ಮಾರಣಾಂತಿಕ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಮತಿ ಪೊಲೀಸರು ಗುರುವಾರ(ಸೆ19) ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಕಡದಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ, ಪುತ್ರ ಅಭಿಷೇಕ್ ಅಲಿಯಾಸ್ ಅಭಿ, ರಾಘು ಸೇರಿದಂತೆ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತುಂಗಭದ್ರಾ ನದಿಯಿಂದ ಮರಳು ತೆಗೆದ ವಿಚಾರವಾಗಿ ಬುಧವಾರ ನಡೆದ ಘರ್ಷಣೆಯಲ್ಲಿ ಮರಿಗೊಂಡನಹಳ್ಳಿ ಗ್ರಾಮದ ಶಿವರಾಜ(33) ಕೊಲೆಯಾಗಿದ್ದು, ಆತನ ಸ್ನೇಹಿತ ಭರತ್ ಗಂಭೀರವಾಗಿ ಗಾಯಗೊಂಡಿದ್ದರು. ಚಾಕು ಇರಿತದಿಂದ ತೀವ್ರ ಗಾಯಗೊಂಡಿದ್ದ ಶಿವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದರು.

ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು. ಮುನ್ನೆಚ್ಚರಿಕೆಯಾಗಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next