Advertisement

Ibbani Tabbida Ileyali; ಬಿಡುಗಡೆಯಾಯಿತು ‘ಓ ಅನಾಹಿತ…..’ ಹಾಡು

09:53 AM Jun 23, 2024 | Team Udayavani |

ಪರಂವಃ ಸ್ಟುಡಿಯೋಸ್‌ ಲಾಂಛನದಲ್ಲಿ ಜಿ.ಎಸ್‌ ಗುಪ್ತ ಹಾಗೂ ರಕ್ಷಿತ್‌ ಶೆಟ್ಟಿ ನಿರ್ಮಿಸುತ್ತಿರುವ, ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನದ ಪ್ರೇಮಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಹಾಡು ಬಿಡುಗಡೆಯಾಗಿದೆ.

Advertisement

ಈಗಾಗಲೇ ಸುಂದರ ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರದಲ್ಲಿ ಗಗನ್‌ ಬಡೇರಿಯಾ ಅವರು ಸಂಗೀತ ಸಂಯೋಜಿಸಿರುವ ಆರು ಹಾಡುಗಳಿವೆ. ಆ ಪೈಕಿ ಚಿತ್ರದ ಮೊದಲ ಇಂಪಾದ ಹಾಡು “ಓ ಅನಾಹಿತ..’ಜೂನ್‌ 21ರಂದು ಬಿಡುಗಡೆಯಾಗಿದೆ. ನಿರ್ದೇಶಕ ಚಂದ್ರಜಿತ್‌ ಬೆಳ್ಳಿಯಪ್ಪ ಅವರೆ ಈ ಹಾಡನ್ನು ಬರೆದಿದ್ದು, ಮೂಲ ಸಂಯೋಜನೆಯನ್ನು ಮಾಡಿದ್ದಾರೆ. ದೀಕ್ಷಿತ್‌ ಈ ಗೀತೆಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಸಪ್ತ ಸಾಗರ ಖ್ಯಾತಿಯ ಕಪಿಲ್‌ ಕಪಿಲನ್‌ ಈ ಹಾಡನ್ನು ಹಾಡಿದ್ದಾರೆ.

ಕಿರಿಕ್‌ ಪಾರ್ಟಿ ಹಾಗೂ ಅವನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್‌ ಬೆಳಿಯಪ್ಪ, ರಕ್ಷಿತ್‌ ಅವರ ಸೆವೆನ್‌ ಓಡ್ಸ್‌ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾ ಸಂಗಮ ಚಿತ್ರದ ನಿರ್ದೇಶಕರಲ್ಲಿ ಒಬ್ಬರಾಗಿದ್ದರು. ಈಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಬಿರುಸಿನಿಂದ ಸಾಗಿದೆ.  ವಿಹಾನ್‌ ಈ ಚಿತ್ರದ ನಾಯಕ. ಐದು ವರ್ಷಗಳ ನಂತರ ವಿಹಾನ್‌ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಅಂಕಿತಾ ಅಮರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಗಿರಿಜಾ ಶೆಟ್ಟರ್‌ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್‌ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶ್ರೀವತ್ಸನ್‌ ಸೆಲ್ವರಾಜನ್‌ ಛಾಯಾಗ್ರಹಣ, ರಕ್ಷಿತ್‌ ಕಾಪ್‌ ಅವರ ಸಂಕಲನವಿರುವ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next