Advertisement

ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣವಚನ ಸ್ವೀಕಾರ

10:29 PM Aug 16, 2022 | Team Udayavani |

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Advertisement

ರಾಜಭವನದ ಗಾಜಿನ ಮನೆಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ನ್ಯಾಯಮೂರ್ತಿಗಳಾಗಿ ಪದೋನ್ನತಿ ಪಡೆದಿರುವ ನ್ಯಾ| ಅನಿಲ್‌ ಭೀಮಸೇನ ಕಟ್ಟಿ, ನ್ಯಾ| ಗುರುಸಿದ್ದಯ್ಯ ಬಸವರಾಜ, ನ್ಯಾ| ಚಂದ್ರಶೇಖರ ಮೃತ್ಯುಂಜಯ ಜೋಶಿ, ನ್ಯಾ| ಉಮೇಶ ಮಂಜುನಾಥ ಭಟ್ಟ ಅಡಿಗ ಹಾಗೂ ನ್ಯಾ| ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಈ ಐವರ ಪದೋನ್ನತಿಯಿಂದ ಹೈಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 48ಕ್ಕೆ ಏರಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಸೇರಿ ಶಾಸಕರು, ಹೈಕೋರ್ಟ್‌ ನ್ಯಾಯಮೂರ್ತಿಗಳು, ವಕೀಲರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next