Advertisement

ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?

12:00 AM Aug 05, 2021 | Team Udayavani |

ಹೊಸದಿಲ್ಲಿ: ಇನ್ನು ಮುಂದೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಅಧಿಕಾರ ಮತ್ತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೇ ಬರಲಿದೆ!

Advertisement

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಮೇ 5ರಂದು ಸುಪ್ರೀಂಕೋರ್ಟ್‌, ಒಬಿಸಿ ಮೀಸಲಾತಿ ನೀಡುವ ಅಧಿಕಾರ ರಾಜ್ಯಗಳಿಗಿಲ್ಲ ಎಂದು ತೀರ್ಪು ನೀಡಿತ್ತು. ಹಾಗೆಯೇ ಕೇಂದ್ರ ಸರಕಾರಕ್ಕೆ ಮಾತ್ರ  ಇಂಥ ಅಧಿಕಾರವಿದೆ ಎಂದೂ ಹೇಳಿತ್ತು. ಈಗ ಕೇಂದ್ರ ಸರಕಾರ ರಾಜ್ಯಗಳಿಗೆ ಒಬಿಸಿ ಪಟ್ಟಿ ರಚಿಸುವ ಅಧಿಕಾರ ನೀಡುವಂಥ ಸಂವಿಧಾನ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ನೀಡಿದೆ ಎಂದು ಮೂಲಗಳು ಹೇಳಿವೆ. ಸದ್ಯದಲ್ಲೇ ಇದನ್ನು ಸಂಸತ್‌ನ ಉಭಯ ಸದನಗಳಲ್ಲೂ ಮಂಡಿಸಿ ಅಂಗೀಕಾರ ಪಡೆಯಲಾಗುತ್ತದೆ ಎಂದೂ ಹೇಳಲಾಗಿದೆ.

ಮುಂದುವರಿಕೆ: ಸದ್ಯ ಜಾರಿಯಲ್ಲಿರುವ ಸರ್ವ ಶಿಕ್ಷಾ ಅಭಿಯಾನವನ್ನು ಮುಂದಿನ 5 ವರ್ಷಗಳ ಕಾಲ ಮುಂದುವರಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಅದರ ಅನ್ವಯ ಪ್ರಸಕ್ತ ವರ್ಷದ ಎ.1ರಿಂದ 2026ರ ಮಾ.31ರ ವರೆಗೆ ಯೋಜನೆ ಮುಂದುವರಿಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ಅದಕ್ಕೆ “ಸಮಗ್ರ ಶಿಕ್ಷಾ ಅಭಿಯಾನ 2′ ಎಂದು ಹೆಸರಿಸಲಾಗಿದೆ.

ಅನುಮತಿ: ದೇಶದಲ್ಲಿ 1,023 ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗಳನ್ನು ಮುಂದುವರಿಸುವ ಬಗ್ಗೆ  ಕೇಂದ್ರ ಸಂಪುಟ  ಅನುಮತಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next