Advertisement

ಸಾಸ್ತಾನ ಟೋಲ್‌ಗೇಟ್‌ನಲ್ಲಿ ಸಾಗರ ಕವಚ ಅಣಕು ಕಾರ್ಯಾಚರಣೆ

11:53 PM Nov 06, 2019 | Team Udayavani |

ಕೋಟ: ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗೃತೆ ಕ್ರಮ ಹಾಗೂ ಪ್ರಸ್ತುತ ಇರುವ ರಕ್ಷಣಾ ತಂತ್ರಗಳ ಮೌಲ್ಯಮಾಪನದ ಸಲುವಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಸೂಚನೆಯಂತೆ ಜಿಲ್ಲಾದ್ಯಂತ ಕೈಗೊಳ್ಳಲಾದ ಸಾಗರ ಕವಚ ಕಾರ್ಯಾಚರಣೆ ಪ್ರಯುಕ್ತ ನ. 6ರಂದು ಸಾಸ್ತಾನ ಟೋಲ್‌ಗೇಟ್‌ನಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

Advertisement

ಈ ಸಂದರ್ಭ ಕೋಟ ಪೊಲೀಸ್‌ ಠಾಣೆ ಉಪನಿರೀಕ್ಷಕ ನಿತ್ಯಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಟೋಲ್‌ಗೇಟ್‌ನ ಸಮೀಪ ಎಲ್ಲ ವಾಹನಗಳನ್ನು ತಪಾಸಣೆ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು.

ಭದ್ರತೆಯ ಸಲುವಾಗಿ ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸ ಲಾಯಿತು ಹಾಗೂ ಭಯೋತ್ಪಾದಕ ದಾಳಿಗಳು ಎದುರಾದರೆ ಕೈಗೊಳ್ಳಬೇಕಾದ ಮುಂಜಾಗೃತೆ ಕ್ರಮಗಳ ಕುರಿತು ಪರಾ ಮರ್ಶಿಸಲಾಯಿತು. ಕಾರ್ಯಾಚರಣೆಯ ಸಂದರ್ಭ ಪೊಲೀಸ್‌ ತುಕಡಿ ವ್ಯವಸ್ಥೆ ಗೊಳಿಸಲಾಗಿತ್ತು. ಪೊಲೀಸ್‌ ಸಿಬಂದಿ ಭಾಗವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next