Advertisement

ಕೋವಿಡ್‌ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಇಂದು ಸಮಾಲೋಚನೆ : ಸುಧಾಕರ್‌

01:50 AM Jun 01, 2021 | Team Udayavani |

ಚಿಕ್ಕಬಳ್ಳಾಪುರ: ಮುಂದಿನ ಒಂದು ತಿಂಗಳ ಅವಧಿಗೆ ಕೋವಿಡ್‌ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ವರದಿ ನೀಡಿದ್ದು, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯುವ ಸಭೆಯಲ್ಲಿ ಆ ಕುರಿತು ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಅವರು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆವಲಗುರ್ಕಿ ಗ್ರಾಮ ಪಂಚಾಯಿತಿಯ ಸೂಲಕುಂಟೆ ಗ್ರಾಮದಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ನಿವಾಸಿಗಳಿಗೆ ಸದ್ಗುರು ಜಗ್ಗಿವಾಸುದೇವ್‌ ಅವರ ಇಶಾ ಫೌಂಡೇಶನ್‌ ವತಿಯಿಂದ ನೀಡಿರುವ ಆಹಾರ ಧಾನ್ಯಗಳ ಕಿಟ್‌ ವಿತರಿಸಿ ಸೋಮವಾರ ಮಾತನಾಡಿದರು.

Advertisement

ಕೋವಿಡ್‌ ಎರಡನೇ ಅಲೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಅಂಶಗಳ ತಳಹದಿ ಮೇಲೆ ಅಧ್ಯ ಯನ ನಡೆಸಿರುವ ಸಮಿತಿಯು ಮುಂದಿನ 15 ರಿಂದ ಒಂದು ತಿಂಗಳ ಅವಧಿಗೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬು ದನ್ನು ವರದಿಯಲ್ಲಿ ತಿಳಿಸಿದೆ. ಅದನ್ನು ಮುಖ್ಯಮಂತ್ರಿಯವರಿಗೆ ನೀಡಿದ್ದೇವೆ. ಸಚಿವ ಸಂಪುಟದ ಹಿರಿಯ ಸದಸ್ಯರ ಜತೆ ನಡೆಯುವ ಸಭೆಯಲ್ಲಿ ಸಿಎಂ ಅವರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ. ತಜ್ಞರು ನೀಡುವ ಸಲಹೆಗಳಿಗೆ ಹೆಚ್ಚಿನ ಮಹತ್ವವಿದೆ ಎಂದು ತಿಳಿಸಿದರು.

ಲಾಕ್‌ಡೌನ್‌ನಿಂದ ಸೋಂಕಿನ ಪ್ರಮಾಣ ತಗ್ಗಿಸಲು ಸಾಧ್ಯವಾಗಿದೆ. ಶೇ.45 ರಿಂದ 50ರಷ್ಟಿದ್ದ ಸೋಂಕಿನ ಪ್ರಮಾಣ ಲಾಕ್‌ಡೌನ್‌ ಬಳಿಕ ಶೇ. 15 ರಿಂದ 17ಕ್ಕೆ ಇಳಿದಿದೆ. ಮೈಸೂರು ಸಹಿತ ಕೆಲ ಜಿಲ್ಲೆಗಳಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಇದು ಇನ್ನೂ ಕಡಿಮೆ ಆಗಬೇಕು. ಕಡಿಮೆ ಆಗಿದೆ ಎಂದಾಕ್ಷಣ ಎರಡನೇ ಅಲೆ ಮುಕ್ತಾಯವಾಗಿದೆ ಎಂದು ಭಾವಿಸುವಂತಿಲ್ಲ. ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳನ್ನು ಜನರು ಎಚ್ಚರಿಕೆಯಿಂದ ಅನುಸರಿಸಬೇಕು ಎಂದೂ ಅವರು ಕಿವಿ ಮಾತು ಹೇಳಿದರು.

ಸತತ ಸಂಪರ್ಕದಲ್ಲಿದ್ದೇವೆಘಿ
ರಾಜ್ಯದಲ್ಲಿ 1250 ಮಂದಿಗೆ ಬ್ಲ್ಯಾಕ್‌ ಫ‌ಂಗಸ್‌ ಸೋಂಕು ಕಾಣಿಸಿಕೊಂಡಿದೆ. ಎಲ್ಲ ಜಿಲ್ಲೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಔಷಧ ಸಿಗುತ್ತಿಲ್ಲ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ಸಾಧ್ಯವಾದಷ್ಟು ಔಷಧ ತರಿಸುವ ಕೆಲಸ ಮಾಡಲಾಗುತ್ತಿದೆ. ಪ್ರತಿ ದಿನ 8 ರಿಂದ 10 ಸಾವಿರ ವಯಲ್ಸ… ಬೇಕಾಗಿದೆ ಎಂದು ಮನವಿ ಮಾಡಲಾಗಿದೆ. ಸದ್ಯ ರಾಜ್ಯಾದ್ಯಂತ ಆಕ್ಸಿಜನ್‌ ಬಳಕೆ ಕಡಿಮೆಯಾಗಿದೆ ಎಂದೂ ಸಚಿವರು ತಿಳಿಸಿದರು.

ಬ್ಲ್ಯಾಕ್‌ ಫ‌ಂಗಸ್‌ ಸೋಂಕಿಗೆ ಕಾರಣಗಳನ್ನು ಪತ್ತೆ ಹಚ್ಚಲು ತಜ್ಞರ ಸಮಿತಿ ರಚಿಸಲಾಗಿದೆ. ಈಗಾಗಲೇ ಅವರು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಇನ್ನೂ ಅಂತಿಮ ವರದಿ ಬರಬೇಕಿದೆ. ಸಕ್ಕರೆ ಕಾಯಿಲೆ ಇದ್ದು ನಿಯಂತ್ರಣದಲ್ಲಿ ಇಲ್ಲದವರಿಗೆ ಕೋವಿಡ್‌ನಿಂದ ಗುಣಮಖರಾದ ಬಳಿಕ, ಅತಿ ಹೆಚ್ಚು ಆಕ್ಸಿಜನ್‌ ಬಳಕೆ ಮಾಡಿದ್ದವರಿಗೆ, ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಸ್ಟಿರಾಯ್ಡ್ ಬಳಕೆ ಮಾಡಿದ್ದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಅಂತಿಮ ವರದಿ ಇನ್ನೂ ಬರಬೇಕಿದೆ ಎಂದು ಸ್ಪಷ್ಟಪಡಿಸಿದರು. ವೈದ್ಯರ ನಡಿಗೆ ಗ್ರಾಮಗಳ ಕಡೆಗೆ ನಿಜಕ್ಕೂ ಅತ್ಯುತ್ತಮ ಕಾರ್ಯಕ್ರಮ. ಜನರ ಬಳಿಗೇ ತೆರಳಿ ಸರಕಾರದ ಸವಲತ್ತು ಒದಗಿಸುವುದು ಎಂದಿಗೂ ಉತ್ತಮ ಕೆಲಸ. ಇಂಥ ಆರೋಗ್ಯದ ತುರ್ತು ಪರಿಸ್ಥಿತಿಯಲ್ಲಿ ವೈದ್ಯರೇ ಗ್ರಾಮಗಳಿಗೆ ತೆರಳಿ ತಪಾಸಣೆ ಮಾಡುವುದು ನಿಜಕ್ಕೂ ಉತ್ತಮ ಕಾರ್ಯಕ್ರಮ ಎಂದೂ ಸಚಿವ ಸುಧಾಕರ್‌ ಹೇಳಿದರು.

Advertisement

ಕೋವಿಡ್‌ ಕೇರ್‌ ಸೆಂಟರ್‌ ಉದ್ಘಾಟನೆ
ನಂದಿ ಪಂಚಾಯಿತಿ ವ್ಯಾಪ್ತಿಯ ಕೊಲಮೇನಹಳ್ಳಿ ಯಲ್ಲಿರುವ ಮೊರಾರ್ಜಿ ವಸತಿ ಶಾಲೆ ಕ್ಯಾಂಪಸ್‌ಗೆ ಭೇಟಿ ನೀಡಿದ್ದ ಸಚಿವ ಸುಧಾಕರ್‌ ಅವರು ಜಿಲ್ಲಾಡಳಿತ ಸಿದ್ಧಪಡಿಸಿರುವ ಕೋವಿಡ್‌ ಕೇರ್‌ ಸೆಂಟರ್‌ಅನ್ನು ಉದ್ಘಾಟಿಸಿದರು. ಬಳಿಕ ಅಧಿಕಾರಿಗಳ ಜತೆ ಮಾತನಾಡಿ, ಕೋವಿಡ್‌ ಹಾರೈಕೆ ಕೇಂದ್ರಕ್ಕೆ ದಾಖಲಾಗುವ ಸೋಂಕಿತರಿಗೆ ಉತ್ತಮ ಗುಣಮಟ್ಟದ ಹಾರೈಕೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಉತ್ತಮ ಆಹಾರ, ಔಷಧೋಪಚಾರಗಳ ಜತೆಗೆ ಅವರಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದೂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಆರ್‌ ಲತಾ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ವೈದ್ಯರ ನಡೆ ಹಳ್ಳಿ ಕಡೆ: ಸಂಜೆ ಗೌರಿಬಿದನೂರು ತಾಲೂಕು ಮಂಚೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಸಚಿವ ಸುಧಾಕರ್‌ ಅವರು ಚಾಲನೆ ನೀಡಿದರು.

ಲಾಕ್‌ಡೌನ್‌ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ
ಬೆಂಗಳೂರು: ಲಾಕ್‌ ಡೌನ್‌ ಕುರಿತು ರಾಜ್ಯ ಸರಕಾರ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಈ ಕುರಿತು ಮುಖ್ಯಮಂತ್ರಿ ಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತ ನಾಡಿ, ಜನಪ್ರತಿನಿಧಿಗಳು ಜನರ ಜೀವನವನ್ನು ಬಹಳ ಹತ್ತಿರದಿಂದ ನೋಡುತ್ತಾರೆ. ಜನರ ಭಾವನೆ ಗಳಿಗೆ ಸ್ಪಂದಿಸಲು ಕೆಲ ಜನ ಪ್ರತಿನಿಧಿಗಳು ಲಾಕ್‌ ಡೌನ್‌ ಬಗ್ಗೆ ಹೇಳಿಕೆ ನೀಡ ಬಹುದು. ಆದರೆ ಸರಕಾರ ವೈಜ್ಞಾನಿಕ ನೆಲೆಗಟ್ಟಿನಲ್ಲೇ ಲಾಕ್‌ ಡೌನ್‌ ಕುರಿತು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದರು. ಲಾಕ್‌ ಡೌನ್‌ ಗೆ ಸಂಬಂಧಿಸಿದಂತೆ ತಜ್ಞರು ವರದಿ ಸಲ್ಲಿಸಲಿದ್ದಾರೆ. ಇದನ್ನು ಮುಖ್ಯಮಂತ್ರಿಗಳಿಗೆ ನೀಡಿ ಚರ್ಚಿಸಲಾಗುವುದು. ನಂತರ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಲಾಕ್‌ ಡೌನ್‌ ಎನ್ನುವುದು ವೈದ್ಯಕೀಯ ಸಂಗತಿ. ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ಎಷ್ಟೆಲ್ಲ ಸಾವು ನೋವುಗಳಾಗಿದೆ ಎಂಬುದನ್ನು ಅರಿಯಬೇಕು. ಇದು ಸಾಂಕ್ರಾಮಿಕವಾಗಿ ರುವುದರಿಂದ ಬಹಳ ಎಚ್ಚರಿಕೆ ಬೇಕು. ಲಾಕ್‌ ಡೌನ್‌ ಅನ್ನು ತಾಂತ್ರಿಕವಾಗಿ ಅರ್ಥ ಮಾಡಿಕೊಳ್ಳದೆ, ವೈದ್ಯಕೀಯ ವಲಯದ ಪರಿಣತರ ಅಭಿಪ್ರಾಯ ಪಡೆಯದೆ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದರು.

ಈ ಸಂದರ್ಭದಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದೇ ಅಪ್ರಸ್ತುತ. ಮುಖ್ಯಮಂತ್ರಿ ಕುರ್ಚಿ ಖಾಲಿಯೇ ಇಲ್ಲದಿರುವಾಗ ಆ ಬಗ್ಗೆ ಮಾತನಾಡುವುದೇ ಅಸಂಬದ್ಧ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next