Advertisement

ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್‌ ಸ್ವೀಪ್‌ ನಿರೀಕ್ಷೆ

12:12 AM Jul 07, 2022 | Team Udayavani |

ಪಲ್ಲೆಕೆಲೆ: ಭಾರತೀಯ ವನಿತಾ ಕ್ರಿಕೆಟ್‌ ತಂಡವು ಮೂರನೇ ತಥಾ ಅಂತಿಮ ಏಕದಿನ ಪಂದ್ಯದಲ್ಲಿ ಗುರುವಾರ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

Advertisement

ಈ ಪಂದ್ಯದಲ್ಲಿಯೂ ಜಯ ಸಾಧಿಸಿ ಕ್ಲೀನ್‌ ಸ್ವೀಪ್‌ ಗುರಿಯನ್ನು ಭಾರತ ಇಟ್ಟುಕೊಂಡಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದೆ.

ಮಿಥಾಲಿ ರಾಜ್‌ ನಿವೃತ್ತಿಯಾದ ಬಳಿಕ ಮೊದಲ ಸರಣಿಯಲ್ಲಿ ಆಡುತ್ತಿರುವ ಭಾರತೀಯ ತಂಡವು ಈ ಸರಣಿಯಲ್ಲಿ ಉತ್ತಮವಾಗಿ ಆಡುತ್ತಿದೆ.

ಸೋಮವಾರ ನಡೆದ ದ್ವಿತೀಯ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಗೆಲುವು ದಾಖಲಿಸಿತ್ತು. ಪಂದ್ಯದ ಪ್ರತಿಯೊಂದು ವಿಭಾಗದಲ್ಲಿ ಭಾರತ ನಿಯಂತ್ರಿತ ಪ್ರದರ್ಶನ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next