Advertisement

ಭಾರತ-ದ.ಆಫ್ರಿಕಾ: ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಋತುರಾಜ್- ಬಿಷ್ಣೋಯ್

05:07 PM Oct 06, 2022 | Team Udayavani |

ಲಕ್ನೋ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಮಳೆಯಿಂದಾಗಿ ತಡವಾಗಿ ಆರಂಭವಾದ ಪಂದ್ಯದಲ್ಲಿ ಭಾರತ ತಂಡದಲ್ಲಿ ಎರಡು ಹೊಸ ಮುಖಗಳು ಕಾಣಿಸಿಕೊಂಡಿದೆ.

Advertisement

ಮಳೆಯ ಕಾರಣದಿಂದ ಟಾಸ್ ವಿಳಂಬವಾಯಿತು. ಹೀಗಾಗಿ ಪಂದ್ಯವನ್ನು ತಲಾ 40 ಓವರ್ ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿತು, “ನಾವು ಮೊದಲು ಫೀಲ್ಡಿಂಗ್ ಮಾಡಲು ಬಯಸುತ್ತೇವೆ. ವಿಕೆಟ್‌ ನಲ್ಲಿ ಸ್ವಲ್ಪ ತೇವಾಂಶವಿದೆ ಮತ್ತು ಅದನ್ನು ಬಳಸಿಕೊಳ್ಳಲು ನಾವು ಬಯಸುತ್ತೇವೆ. ನಮಲ್ಲಿಂದು ಆರು ಬ್ಯಾಟರ್‌ಗಳು ಮತ್ತು ಐದು ಬೌಲರ್‌ಗಳು ಆಡುತ್ತಿದ್ದಾರೆ” ಎಂದು ಭಾರತ ತಂಡದ ನಾಯಕ ಶಿಖರ್ ಧವನ್ ಹೇಳಿದರು.

ಇಂದಿನ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಮತ್ತು ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ಶಿಖರ್ ಧವನ್ ನಾಯಕತ್ವದಲ್ಲಿ ಬಿಷ್ಣೋಯ್ ಮತ್ತು ಗಾಯಕ್ವಾಡ್ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡುತ್ತಿದ್ದಾರೆ.

ಭಾರತದ ಟಿ20 ತಂಡವು ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿರುವ ಕಾರಣ ಮೀಸಲು ತಂಡವನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿದೆ. ಶಿಖರ್ ಧವನ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisement

ಭಾರತ ತಂಡ: ಶಿಖರ್ ಧವನ್ (ನಾ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿ.ಕೀ), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್

Advertisement

Udayavani is now on Telegram. Click here to join our channel and stay updated with the latest news.

Next