Advertisement

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

07:40 PM Apr 25, 2024 | Team Udayavani |

ಭುವನೇಶ್ವರ್‌: ಒಡಿಶಾದ ಬೌದ್ಧ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ನಕ್ಸ ಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

Advertisement

ಕಾಂತಮಾಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಪಹೆìಲ್‌ ಮೀಸಲು ಅರಣ್ಯ ಪ್ರದೇಶದಲ್ಲಿ ಒಡಿಶಾದ ಎಲೈಟ್‌ ಸ್ಪೆಷಲ್‌ ಆಪರೇಷನ್‌ ಗ್ರೂಪ್‌ (ಎಸ್‌ಒಜಿ) ಹಾಗೂ ಮಾವೋವಾದಿಗಳ ನಡುವೆ ಸಂಘರ್ಷ ಸಂಭವಿಸಿದ್ದು, ಇಬ್ಬರು ನಕ್ಸಲರನ್ನು ಹತ್ಯೆಗೈಯ್ಯಲಾಗಿದೆ. ಅವರಿಂದ ಗ್ರೆನೇಡ್‌ ಸೇರಿ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next