Advertisement

Odisha ಸಂಬಲ್ಪುರ ಹಿಂಸಾಚಾರ ಪ್ರಕರಣ; 79 ಬಂಧನ, ಕರ್ಫ್ಯೂ ಮುಂದುವರಿಕೆ

05:48 PM Apr 16, 2023 | Team Udayavani |

ಸಂಬಲ್ಪುರ : ಹನುಮ ಜಯಂತಿ ಆಚರಣೆ ವೇಳೆ ಸಂಬಲ್‌ಪುರ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಒಡಿಶಾ ಪೊಲೀಸರು 79 ಜನರನ್ನು ಬಂಧಿಸಿದ್ದಾರೆ.

Advertisement

ಸಂಬಲ್‌ಪುರದಲ್ಲಿ ಪರಿಸ್ಥಿತಿ ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದ್ದು, ಅಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವುದರ ಜೊತೆಗೆ ಕರ್ಫ್ಯೂ ಇನ್ನೂ ಮುಂದುವರೆದಿದೆ. ನಗರದಲ್ಲಿ ಶನಿವಾರ ಬೆಳಗ್ಗೆ ಕರ್ಫ್ಯೂ ಘೋಷಿಸಿದಾಗಿನಿಂದ ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ ಎಂದು ಸಂಬಲ್‌ಪುರ ಎಸ್ಪಿ ಬಿ ಗಂಗಾಧರ್ ತಿಳಿಸಿದ್ದಾರೆ.

ಇನ್ನೂ ಹಲವು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಎ 12 ರಂದು ಬೈಕ್ ರ‍್ಯಾಲಿ ವೇಳೆ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ 26 ಜನರನ್ನು ಬಂಧಿಸಿದ್ದರೆ, ಎ 14 ರಂದು ಮೆರವಣಿಗೆಯಲ್ಲಿ ಹಿಂಸಾಚಾರ ಮತ್ತು ಬೆಂಕಿ ಹಚ್ಚಿದ ಆರೋಪದಲ್ಲಿ 53 ಜನರನ್ನು ಬಂಧಿಸಲಾಗಿದೆ” ಎಂದು ಗಂಗಾಧರ್ ಹೇಳಿದರು.

“ಇದುವರೆಗಿನ ಸೂಚನೆಗಳ ಪ್ರಕಾರ ಇದು ಪೂರ್ವ ಯೋಜಿತ ಹಿಂಸಾಚಾರದಂತೆ ತೋರುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸಲಾಗುವುದು,” ಎಂದರು.

ಸಂಬಲ್ಪುರ ಜಿಲ್ಲೆಯಲ್ಲಿ ಎ 17 ರ ಬೆಳಗ್ಗೆ 10 ರವರೆಗೆ ರಾಜ್ಯ ಸರ್ಕಾರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next