Advertisement

ಪದ್ಮ ಪ್ರಶಸ್ತಿ ಸ್ವೀಕರಿಸಲು ಖ್ಯಾತ ಲೇಖಕಿ ಗೀತಾ ನಿರಾಕರಿಸಿದ್ದು ಯಾಕೆ

06:17 AM Jan 26, 2019 | Sharanya Alva |

ಭುವನೇಶ್ವರ್:ಭಾರತದ 70ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ಪದ್ಮ ಪ್ರಶಸ್ತಿಯನ್ನು ಖ್ಯಾತ ಲೇಖಕಿ ಗೀತಾ ಮೆಹ್ತಾ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಅಮೆರಿಕದ ನಿವಾಸಿಯಾಗಿರುವ ಗೀತಾ ಮೆಹ್ತಾ ಒಡಿಶಾ ಮೂಲದವರಾಗಿದ್ದಾರೆ.

Advertisement

ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಗೀತಾ ಮೆಹ್ತಾಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿತ್ತು.

ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್ ನಿಂದ ಪತ್ರಿಕಾ ಪ್ರಕಟಣೆ ನೀಡಿರುವ ಮೆಹ್ತಾ, ಈ ಸಮಯ ಸೂಕ್ತವಾದುದಲ್ಲ, ಹೀಗಾಗಿ ಪದ್ಮ ಪ್ರಶಸ್ತಿಯನ್ನು ಸ್ವೀಕರಿಸಲಾರೆ ಎಂದು ತಿಳಿಸಿದ್ದಾರೆಂದು ಸ್ಥಳೀಯ ವೆಬ್ ಸೈಟ್ ವರದಿ ಮಾಡಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರೆ ಅಪಾರ್ಥಕ್ಕೆ ಎಡೆ ಮಾಡಿಕೊಡಲಿದೆ ಎಂದು ಮೆಹ್ತಾ ತಿಳಿಸಿದ್ದಾರೆ.

ಭಾರತ ಸರ್ಕಾರ ನನ್ನ ಗುರುತಿಸಿರುವುದಕ್ಕೆ ವಿನಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ..ಅಲ್ಲದೇ ನಾನು ಪದ್ಮಶ್ರೀ ಪ್ರಶಸ್ತಿಗೆ ಯೋಗ್ಯಳೇ ಎಂಬುದನ್ನು ಆಲೋಚಿಸುವಂತೆ ಮಾಡಿದೆ. ಆದರೆ ನಾನು ತುಂಬಾ ವಿಷಾದ ವ್ಯಕ್ತಪಡಿಸುತ್ತಿದ್ದೇನೆ, ಯಾಕೆಂದರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ನಿಟ್ಟಿನಲ್ಲಿ ಪ್ರಶಸ್ತಿ ಸ್ವೀಕರಿಸಲು ಇದು ಸೂಕ್ತ ಕಾಲ ಅಲ್ಲ. ಹೀಗಾಗಿ ಸರ್ಕಾರಕ್ಕೂ, ನನಗೂ ಮುಜುಗರ ಉಂಟು ಮಾಡಲು ಕಾರಣವಾಗಿದ್ದಕ್ಕೆ ವಿಷಾದಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೀತಾ ಮೆಹ್ತಾ ಯಾರು?

Advertisement

ಗೀತಾ ಮೆಹ್ತಾ ಒಡಿಶಾದ ಮಾಜಿ ಸಿಎಂ, ದಿವಂಗತ ಬಿಜು ಪಟ್ನಾಯಕ್ ಅವರ ಪುತ್ರಿ. ಹಾಲಿ ಬಿಜೆಡಿ ವರಿಷ್ಠ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸಹೋದರಿ, ಅಮೆರಿಕದ ನಿವಾಸಿಯಾಗಿರುವ ಮೆಹ್ತಾ ಖ್ಯಾತ ಲೇಖಕಿಯಾಗಿದ್ದಾರೆ. 14 ಪ್ರಮುಖ ಡಾಕ್ಯುಮೆಂಟರಿಗಳನ್ನು ನಿರ್ದೇಶಿಸಿದ್ದರು. ಗೀತಾ ಮೆಹ್ತಾ ಅವರ ಪುಸ್ತಕ 26 ಭಾಷೆಗಳಿಗೆ ಭಾಷಾಂತರಿಸಲ್ಪಟ್ಟಿದೆ. ಅಷ್ಟೇ ಅಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಸ್ಟ್ ಸೆಲ್ಲರ್ ಪಟ್ಟಿಯಲ್ಲಿ ಗೀತಾ ಮೆಹ್ತಾ ಹೆಸರೂ ಕೂಡಾ ಒಂದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next