Advertisement

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

05:26 PM May 16, 2024 | Team Udayavani |

ಭುವನೇಶ್ವರ : ”ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮೂಲಕ ಒಡಿಶಾದ ಜನರು ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿಕೆ ನೀಡಿದ್ದಾರೆ.

Advertisement

ಪಕ್ಷದ ಅಭ್ಯರ್ಥಿಗಳ ಪರ ಒಡಿಶಾದ ರಾಜಧಾನಿಯಲ್ಲಿ ಭರ್ಜರಿ ರೋಡ್‌ಶೋದಲ್ಲಿ ಭಾಗಿಯಾದ ನಡ್ಡಾ, ‘ಕಳೆದ 24 ವರ್ಷಗಳಿಂದ ಒಡಿಶಾದಲ್ಲಿ ಆಡಳಿತ ನಡೆಸುತ್ತಿರುವ ನವೀನ್ ಪಟ್ನಾಯಕ್‌ಗೆ ಬೀಳ್ಕೊಡುಗೆ ಕೊಟ್ಟು ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಲಿದ್ದಾರೆ ಎಂದು ಜನರ ಉತ್ಸಾಹವು ಸೂಚಿಸುತ್ತದೆ’ ಎಂದರು.

ಮೇ 13 ರಂದು ಒಡಿಶಾದಲ್ಲಿ ನಡೆದ ಮೊದಲ ಹಂತದ ಏಕಕಾಲದ ಚುನಾವಣೆಯನ್ನು ಉಲ್ಲೇಖಿಸಿ, ನಾಲ್ಕು ಲೋಕಸಭಾ ಸ್ಥಾನಗಳು ಮತ್ತು 28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಡಿದ್ದು, ಬಿಜೆಡಿಗೆ ಬಸ್ ತಪ್ಪಿದೆ ಎಂದುರು.

ಒಡಿಶಾದಲ್ಲಿ ಬಿಜೆಪಿಯ ಸಂಭಾವ್ಯ ಸಿಎಂ ಫೇಸ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಚುನಾವಣ ಫಲಿತಾಂಶದ ಮೂರು ದಿನಗಳಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ನಿರ್ಧರಿಸಿತ್ತು ಅದೇ ರೀತಿ ಒಡಿಶಾದಲ್ಲಿ ಕೂಡ ನಡೆಯುತ್ತದೆ” ಎಂದರು.

3  ಪಕ್ಷಗಳಿಂದ ಭರ್ಜರಿ ಪ್ರಚಾರ

Advertisement

ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಯುತ್ತಿದ್ದು, ಬಿಜೆಡಿ ಕೈಯಿಂದ ಬಿಜೆಪಿ ಅಧಿಕಾರ ಕಸಿಯಲು, ಹೆಚ್ಚು ಸಂಸತ್ ಸದಸ್ಯರ ಆಯ್ಕೆಗಾಗಿ ಭರ್ಜರಿ ಪ್ರಚಾರ ನಡೆಸುತ್ತಿದೆ.

ಮುಖ್ಯಮಂತ್ರಿ ಮತ್ತು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಗುರುವಾರ ಸಂಜೆ ಭುವನೇಶ್ವರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕಂಧಮಾಲ್ ಜಿಲ್ಲೆಯ ಫುಲ್ಬಾನಿಯಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೋಲಂಗಿರ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಒಂದು ದಿನದ ಕಾಂಗ್ರೆಸ್ ಇನ್ನೊಂದು ಬೃಹತ್ ಸಭೆ ನಡೆಸುತ್ತಿದೆ.

ಎರಡು ಬಾರಿ ಒಡಿಶಾಗೆ ಚುನಾವಣಾ ಪ್ರಚಾರಕ್ಕಾಗಿ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮೇ 20 ರಂದು ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಕೇಂದ್ರ ಸಚಿವರಲ್ಲದೆ, ಬಿಜೆಪಿ ಆಡಳಿತವಿರುವ ಅಸ್ಸಾಂ, ಛತ್ತೀಸ್ ಗಢ ಮತ್ತು ರಾಜಸ್ಥಾನದ ಮುಖ್ಯಮಂತ್ರಿಗಳು ಪ್ರಚಾರ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next