Advertisement

ಕುಣಿಗಲ್‌ನಲ್ಲಿ ಒಡಿಶಾ ಮೂಲದ ಮಹಿಳೆ ಬರ್ಬರ ಹತ್ಯೆ

02:09 PM Jul 18, 2022 | Team Udayavani |

ಕುಣಿಗಲ್: ಹರಿತವಾದ ಆಯುಧದಿಂದ ಕತ್ತು ಕೊಯ್ದು ಮಹಿಳೆಯೋರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ಯಲಗಲವಾಡಿ ಸಮೀಪದ ಕೂರಲಶಾನಯ್ಯನ ಪಾಳ್ಯ ಗ್ರಾಮದಲ್ಲಿ ಸೋಮವಾರ ನಡೆದಿದೆ.

Advertisement

ಒರಿಸ್ಸಾ ರಾಜ್ಯ ಮೂಲದ  ಸಖಿ (45) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.

ಒಡಿಶಾದಿಂದ ಇಟ್ಡಿಗೆ ಗೂಡು ಕೆಲಸಕ್ಕೆ ಸಖಿ ಸೇರಿದಂತೆ ನಾಲ್ಕು ಮಂದಿ ಕೆಲವು ದಿನಗಳ ಹಿಂದೆ ಕುಣಿಗಲ್ ತಾಲೂಕು ಕೂರಲಶಾನಯ್ಯನಪಾಳ್ಯ ಗ್ರಾಮಕ್ಕೆ ಬಂದು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 56 ಎದೆಯಳತೆಯ ಪ್ರಧಾನಿ ಬಡವರ ಹೊಟ್ಟೆ ಬಗೆಯುತ್ತಿದ್ದಾರೆ: ಸಿದ್ದರಾಮಯ್ಯ

ಕುಣಿಗಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next