Advertisement

ಜೀವನ ರಥಕ್ಕೆ ಧರ್ಮ ಪಥ: ಒಡಿಯೂರು ಶ್ರೀ

12:30 AM Feb 16, 2019 | |

ವಿಟ್ಲ: ಜೀವನ ರಥ ಸಾಗಲು ಧರ್ಮದ ಪಥ ಅಗತ್ಯ. ಕಷ್ಟಗಳನ್ನು, ಸಮಸ್ಯೆಗಳನ್ನು ಮೆಟ್ಟಿಲುಗಳನ್ನಾಗಿಸಿ ಮುನ್ನಡೆಯಬೇಕು. ದೇಹ ಎನ್ನುವ ರಥವನ್ನು ಮನಸ್ಸೆಂಬ ಹಗ್ಗದಿಂದ ಕಟ್ಟಿ ಬುದ್ಧಿ ಎಂಬ ಸಾರಥಿಯ ಕೈಗೆ ನೀಡಿದಾಗ ಬದುಕು ಸುಸೂತ್ರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

Advertisement

ಅವರು ಶುಕ್ರವಾರ ಒಡಿಯೂರು ಆತ್ರೇಯ ಮಂಟಪದಲ್ಲಿ ಕ್ಷೇತ್ರದ ವತಿಯಿಂದ ನಡೆದ ಶ್ರೀ ಒಡಿಯೂರು ರಥೋತ್ಸವ-ತುಳುನಾಡª ಜಾತ್ರೆ 2019ರ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸಹಾಯಧನ ವಿತರಿಸಿ ಆಶೀರ್ವಚನ ನೀಡಿದರು.

ಸಾಧಿ Ìà ಶ್ರೀ ಮಾತಾನಂದಮಯೀ ಆಶೀರ್ವಚನ ನೀಡಿ ನಂಬಿಕೆಯೇ ಸಂಪತ್ತಿನ ಮೂಲ. ಸಂತರು ಇರುವಲ್ಲಿ ಆನಂದ ತುಂಬಿರುತ್ತದೆ. ಸಮಷ್ಟಿಯ ಉದ್ಧಾರವೇ ಶ್ರೀ ಗುರುಗಳ ಆಶಯ. ಯೋಧರಿಗೆ ದುರ್ಗಾಶಕ್ತಿ ಆವಾಹನೆ ಆಗಲಿ ಎಂದು ಹಾರೈಸಿದರು.

ಅನುದಾನದ ಭರವಸೆ
ವಿಶೇಷ ಅಭ್ಯಾಗತರಾಗಿದ್ದ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಮಾತನಾಡಿ, ಒಡಿಯೂರು ಗ್ರಾಮ ವಿಕಾಸ ಯೋಜನೆ ನೂರಾರು ಸೇವಾ ಕಾರ್ಯಗಳನ್ನು ಆಯೋಜಿಸುತ್ತಿದ್ದು, ಶ್ರೀ ಕ್ಷೇತ್ರಕ್ಕೆ ಆಗಮಿಸುವ ರಸ್ತೆ ವಿಸ್ತರಣೆ ಕಾರ್ಯಗಳಿಗೆ ಸರಕಾರದ ವತಿಯಿಂದ ಅನುದಾನ ತರಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ವಿಶಾಖಪಟ್ಟಣ ಆದಾಯ ತೆರಿಗೆ ಇಲಾಖೆ ಕಮಿಷನರ್‌ ಟಿ.ಎಸ್‌.ಎನ್‌. ಮೂರ್ತಿ, ಮೈಸೂರು ಪೊಲೀಸ್‌ ತರಬೇತಿ ಪ್ರಾಂಶುಪಾಲೆ ಧರಣೀದೇವಿ ಮಾಲಗತ್ತಿ, ಉದ್ಯಮಿ ಜಗನ್ನಾಥ ಶೆಟ್ಟಿ, ಮುಂಬಯಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಹರೀಶ್‌ ಶೆಟ್ಟಿ ಐಕಳ, ಮುಂಬಯಿ ಬಂಟ್ಸ್‌ ಸಂಘದ ವಿಶ್ವನಾಥ ಶೆಟ್ಟಿ ಕರ್ನಿರೆ ಮಾತನಾಡಿದರು.

Advertisement

ಗುರುದೇವ ಸೇವಾ ಬಳಗದ ಪ್ರಮುಖರಾದ ವಾಮಯ್ಯ ಬಿ. ಶೆಟ್ಟಿ ಮುಂಬಯಿ, ರೋಹಿತ್‌ ಡಿ. ಶೆಟ್ಟಿ ನಗ್ರಿಗುತ್ತು, ಕೇರಳದ ಆರ್‌ಟಿಒ ಅಧಿ ಕಾರಿ ಅಜಿತ್‌ ಕುಮಾರ್‌ ಪಂದಳಂ, ಎ. ಅಶೋಕ್‌ ಕುಮಾರ್‌ ಬಿಜೈ, ಕೃಷ್ಣ ಎಲ್‌. ಶೆಟ್ಟಿ, ಜಯಂತ್‌ ಜೆ. ಕೋಟ್ಯಾನ್‌, ಸರ್ವಾಣಿ ಪಿ. ಶೆಟ್ಟಿ, ರೇವತಿ ವಾಮಯ್ಯ ಶೆಟ್ಟಿ, ಸೌಹಾರ್ದ ಸಹಕಾರಿ ಅಧ್ಯಕ್ಷ ಎ. ಸುರೇಶ್‌ ರೈ ಮೊದಲಾದವರು ಉಪಸ್ಥಿತರಿದ್ದರು.

ಯಶವಂತ ವಿಟ್ಲ ಸ್ವಾಗತಿಸಿದರು. ಸದಾಶಿವ ಅಳಿಕೆ ಸಹಾಯಹಸ್ತ ಫಲಾನುಭವಿಗಳ ಪಟ್ಟಿ ಓದಿದರು. ಮಾತೇಶ್‌ ಭಂಡಾರಿ ವಂದಿಸಿದರು. ನಿತ್ಯಶ್ರೀ ರೈ ಆಶಯಗೀತೆ ಹಾಡಿದರು. ಉದ್ಯಮಿ ಪ್ರಕಾಶ್‌ ಕೆ. ಶೆಟ್ಟಿ ಪೇಟೆಮನೆ ಕಾರ್ಯಕ್ರಮ ನಿರೂಪಿಸಿದರು.

ಉಗ್ರರಿಗೆ ಅನುಗ್ರಹವಿಲ್ಲ 
ಯೋಧರ ಹತ್ಯೆಯನ್ನು ಖಂಡಿಸುವುದರ ಜತೆಗೆ ಇದಕ್ಕೆ ಪ್ರತ್ಯುತ್ತರ ನೀಡುವ ಕಾರ್ಯವಾಗಬೇಕು. ಉಗ್ರರಿಗೆ ಯಾವತ್ತೂ ಅನುಗ್ರಹ ವಿರುವುದಿಲ್ಲ. ಯೋಧರಿಗೆ ಸಾಂತ್ವನ ಹೇಳುವ ಕಾರ್ಯವನ್ನು ಸಮಾಜ ಮಾಡಬೇಕು. ಉಗ್ರರನ್ನು ಮುಗಿ ಸಲು ನಮ್ಮ ಸೇನೆಗೆ ಭಗವಂತ ಭೀಮ ಬಲ ನೀಡಲಿ ಎಂದು ಪ್ರಾರ್ಥಿಸುವುದಾಗಿ ಶ್ರೀಗಳು ತಿಳಿಸಿದರು.

ವಿಟ್ಲ: ಶ್ರೀ ಒಡಿಯೂರು ರಥೋತ್ಸವ-ತುಳುನಾಡª ಜಾತ್ರೆಯ ಧಾರ್ಮಿಕ ಸಭೆಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಉದ್ಘಾಟಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next