Advertisement

Commonwealth: ಹೊರಟ್ಟಿ ಕಾಮನ್‌ವೆಲ್ತ್‌ ಸಂಸದೀಯ ಸಮ್ಮೇಳನಕ್ಕೆ

12:28 AM Aug 20, 2023 | Team Udayavani |

ಹುಬ್ಬಳ್ಳಿ: ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಮೂರು ದಿನಗಳ 9ನೇ ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತ ವಲಯ ಸಮ್ಮೇಳನ ಆ.20ರಿಂದ ಆರಂಭಗೊಳ್ಳಲಿದ್ದು, ರಾಜ್ಯದ ಪ್ರತಿನಿಧಿ ಯಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ.

Advertisement

ಆ.21ರಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಸಮ್ಮೇಳನ ಉದ್ಘಾಟಿಸಲಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್‌, ರಾಜ್ಯಸಭೆಯ ಉಪ
ಸಭಾಪತಿ ಹರಿವಂಶ, ರಾಜಸ್ಥಾನದ ವಿಧಾನಸಭಾಧ್ಯಕ್ಷ ಸಿ.ಪಿ.ಜೋಷಿ, ದೇಶದ ಎಲ್ಲ ರಾಜ್ಯಗಳ ವಿಧಾನಸಭೆ ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್‌ ಸಭಾಪತಿ-ಉಪಸಭಾಪತಿಗಳು ಪಾಲ್ಗೊಳ್ಳಲಿದ್ದಾರೆ.

“ಇಂದಿನ ಡಿಜಿಟಲ್‌ ಯುಗದಲ್ಲಿ ಪ್ರಜಾಪ್ರಭುತ್ವದ ಬಲವರ್ಧನೆ ಹಾಗೂ ಅತ್ಯುತ್ತಮ ಆಡಳಿತ’ ವಿಷಯದ ಮೇಲೆ ಮೂರು ದಿನಗಳ ಸಮ್ಮೇಳನ ನಡೆಯಲಿದೆ. “ಪ್ರಜಾಪ್ರಭುತ್ವ ಸಂಸ್ಥೆಗಳ ಮೂಲಕ ರಾಷ್ಟ್ರವನ್ನು ಸದೃಢಗೊಳಿಸುವಲ್ಲಿ ಜನಪ್ರತಿನಿಧಿಗಳ ಪಾತ್ರ’ ವಿಷಯ ಕುರಿತು ಹೊರಟ್ಟಿ ವಿಷಯ ಮಂಡನೆ ಮಾಡಲಿದ್ದಾರೆ.
ಆ.22ರಂದು ಸಮಾರೋಪ ಸಮಾರಂಭ ದಲ್ಲಿ ಉಪರಾಷ್ಟ್ರಪತಿ ಜಗದೀಪ ಧನ್ಕರ್‌, ರಾಜಸ್ಥಾನ ರಾಜ್ಯಪಾಲ ಕಾಲರಾಜ್‌ ಮಿಶ್ರ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನಪರಿಷತ್‌ ಸಭಾಪತಿ ಕಚೇರಿ ಪ್ರಕಟನೆ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next