Advertisement

ಶುಲ್ಕ ಪಾವತಿಗೆ ಆ.16ರವರೆಗೂ ಅವಕಾಶ

11:50 PM Aug 14, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಪ್ರಕೃತಿ ವಿಕೋಪದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಾರದು ಎಂಬ ಉದ್ದೇಶದಿಂದ ವೃತ್ತಿಪರ ಕೋರ್ಸ್‌ಗಳಿಗೆ ಸಿಇಟಿ-2019ರ ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಪಡೆದಿರುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಿ ಕಾಲೇಜಿಗೆ ದಾಖಲಾಗಲು ಆ.16ರ ಸಂಜೆ 5.30ರ ವರೆಗೂ ಅವಕಾಶ ಕಲ್ಪಿಸಲಾಗಿದೆ.

Advertisement

ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌, ಕೃಷಿ ವಿಜ್ಞಾನ, ಬಿ.ಫಾರ್ಮಾ ಮೊದಲಾದ ಕೋರ್ಸ್‌ಗಳಿಗೆ ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಪಡೆದ ವಿದ್ಯಾರ್ಥಿಗಳು ಆ. 14ರ ಸಂಜೆ 5.30ರೊಳಗೆ ಶುಲ್ಕ ಪಾವತಿಸಿ, ಕಾಲೇಜಿಗೆ ಪ್ರವೇಶ ಪಡೆಯಬೇಕೆಂದು ಸೂಚಿಸಲಾಗಿತ್ತು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇನ್ನು ಎರಡು ದಿನ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next