Advertisement

ಸತತ 9 ಗಂಟೆ ಮನೀಶ್ ಸಿಸೋಡಿಯಾರನ್ನು ವಿಚಾರಣೆಗೊಳಪಡಿಸಿದ ಸಿಬಿಐ

10:30 PM Oct 17, 2022 | Team Udayavani |

ನವದೆಹಲಿ: ದೆಹಲಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಮನೀಶ್‌ ಸಿಸೋಡಿಯಾ ಅವರನ್ನು ಸಿಬಿಐ ಸೋಮವಾರ 9 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು.

Advertisement

ಬೆಳಗ್ಗೆ 11.15ಕ್ಕೆ ಶುರುವಾದ ವಿಚಾರಣೆ ರಾತ್ರಿ 8.45ರ ವೇಳೆಗೆ ಮುಕ್ತಾಯವಾಯಿತು. ಈ ಅವಧಿಯಲ್ಲಿ ಆಮ್‌ ಆದ್ಮಿ ಪಕ್ಷ ಸರ್ಕಾರದ ಅಬಕಾರಿ ನೀತಿಯ ಬಗ್ಗೆ ಸಮಗ್ರವಾಗಿ ಪ್ರಶ್ನೆಗಳನ್ನು ಸಿಬಿಐ ಅಧಿಕಾರಿಗಳು ಕೇಳಿದ್ದಾರೆ.

ಮಂಗಳವಾರ ಅವರನ್ನು ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆಯೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ವಿಚಾರಣೆ ಬಳಿಕ ಮಾತನಾಡಿದ ಸಿಸೊÕàಜಿಯಾ ತಮ್ಮ ವಿರುದ್ಧ ನಕಲಿ ಪ್ರಕರಣ ಸೃಷ್ಟಿಸಲಾಗಿದೆ ಎಂದು ದೂರಿದ್ದಾರೆ.

ಸಿಬಿಐ ಕ್ರಮ ಪ್ರಶ್ನಿಸಿ ಪಕ್ಷದ ಸಂಸದ ಸಂಜಯ ಸಿಂಗ್‌ ಸೇರಿದಂತೆ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next