Advertisement

ಶಾಸಕರಿಗೆ ಮೋದಿ ಹೇಳಿದ್ದಕ್ಕಿಂತ ನೂರು ಪಟ್ಟು ಹೆಚ್ಚು ಹಣವಂತೆ!

08:48 AM Sep 21, 2018 | Team Udayavani |

ಬೆಂಗಳೂರು: ಆಪರೇಷನ್‌ ಕಮಲದ ಕುರಿತಾಗಿ ಭಾರೀ ಚರ್ಚೆ ನಡೆಯುತ್ತಿರುವ ವೇಳೆ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿರಿಸಿಕೊಂಡು ಟ್ವೀಟ್‌ಗಳನ್ನು ಮಾಡಿ ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ. 

Advertisement

ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಮುಂಬೈಗೆ ಹೋಗಿಲ್ಲ, ಸರ್ಕಾರ ಸುಭದ್ರವಾಗಿದೆ. ನರೇಂದ್ರ ಮೋದಿಯವರು ಜನರ ಅಕೌಂಟ್‌ಗೆ ಹಾಕುತ್ತೇನೆ ಎಂದು ಹೇಳಿದ್ದ ಮೊತ್ತದ ನೂರು ಪಟ್ಟು ಹೆಚ್ಚು ಹಣ ನೀಡುತ್ತೇವೆ ಎಂದು ನಮ್ಮ ಶಾಸಕರಿಗೆ ಬಿಜೆಪಿಯವರು ಆಮಿಷವೊಡ್ಡುತ್ತಿದ್ದಾರೆ‌, ಆದರೆ ನಮ್ಮ ಶಾಸಕರು ಆಮಿಷಗಳಿಗೆ ಬಲಿಯಾಗಿ ಕೋಮುವಾದಿಗಳೊಂದಿಗೆ ಕೈಜೋಡಿಸುವುದಿಲ್ಲ. ಎಂದು ಬರೆದಿದ್ದಾರೆ. 

ಸಿದ್ದಾಂತ ಮಾತನಾಡುವ ಬಿಜೆಪಿಯವರು ಅಧಿಕಾರಕ್ಕಾಗಿ ಹೀನ ಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಚುನಾವಣೆಯಲ್ಲಿ ಸೋತವರು ವಿರೋಧ ಪಕ್ಷವಾಗಿ ಕೆಲಸ ಮಾಡಬೇಕು ಅದನ್ನು ಬಿಟ್ಟು ಸರ್ಕಾರವನ್ನು ಅಸ್ಥಿರಗೊಳಿಸುವ ಅನೀತಿಯುತ ಪ್ರಯತ್ನ ಮಾಡಬಾರದು. ರಾಜ್ಯದ ಜನ ಇದನ್ನು ಗಮನಿಸುತ್ತಾ ಇದ್ದಾರೆ, ಅವರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಇನ್ನೊಂದು ಟ್ವೀಟ್‌ನಲ್ಲಿ ಬರೆದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next