Advertisement

ಮದುವೆಗೆ ಜನರ ಮಿತಿ ಮೀರಿದರೆ ದಂಡ

03:37 PM Nov 26, 2020 | Suhan S |

ಹಾಸನ: ಕೋವಿಡ್ ನಿಯಂತ್ರಣಕ್ಕೆ ಜನಸಂದಣಿ ನಿಯಂತ್ರಣ ಅನಿವಾರ್ಯ. ಈ ಹಿನ್ನೆಲೆಯಲ್ಲಿ ವಿವಾಹ ಮತ್ತಿತರ ಸಮಾರಂಭಗಳ ಮೇಲೆ ನಿಗಾ ವಹಿಸಬೇಕಾಗಿದ್ದು, ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಉಲ್ಲಂಘಿಸುವ ಕಲ್ಯಾಣ ಮಂಟಪಗಳಿಗೆ ದಂಡ ವಿಧಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌ ನಿರ್ದೇಶನ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು,ಕೋವಿಡ್ ವ್ಯಾಪಕವಾಗಿ ಹರಡುವ ಭೀತಿ ಇದೆ. ಹಾಗಾಗಿ ಕಲ್ಯಾಣ ಮಂಟಪ, ಸಮುದಾಯ ಭವನಗಳಲ್ಲಿ ನಡೆಯುವ ಮದುವೆಗಳಲ್ಲಿ ಮತ್ತಿತರ ಸಮಾಂಭಗಳಲ್ಲಿ 200ಕ್ಕೂ ಅಧಿಕ ಜನ ಸೇರದಂತೆ ಎಚ್ಚರಿಕೆ ವಹಿಸಬೇಕು. ಈ ಸಂಬಂಧ ಕಲ್ಯಾಣ ಮಂಟಪಗಳು, ಸಮುದಾಯ ಭವನಗಳ ಮಾಲಿಕರಿಗೆ ನೋಟಿಸ್‌ ಜಾರಿಗೊಳಿಸಿ, ಆದೇಶ ಪಾಲಿಸದಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲಿಕರು ಮತ್ತು ವಧು – ವರರ ಕುಟುಂಬಕ್ಕೆ ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಂಟಿ ಕಾರ್ಯಾಚರಣೆ ಮಾಡಿ: ನಗರದಲ್ಲಿ ಹೆಚ್ಚು ಜನಸಂದಣಿ ಸೇರದಂತೆ ನಿಯಂತ್ರಿಸಿ ಹಾಗೂ ಮಾಸ್ಕ್ ಬಳಸುವುದೇ ರಸ್ತೆಯಲ್ಲಿ ಓಡಾಡುವವರಿಗೂ ದಂಡ ಹಾಕುವ ಮೂಲಕ ಕೋವಿಡ್ ಹರಡುವುದನ್ನು ತಡೆಗಟ್ಟಲು ಎಲ್ಲಾ ಮುಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಕಂದಾಯ ಹಾಗೂ ಪೊಲೀಸ್‌ ಇಲಾಖೆಜಂಟಿಯಾಗಿಕಾರ್ಯನಿರ್ವಹಿಸಬೇಕು ಎಂದು ನವೀನ್‌ರಾಜ್‌ ಸಿಂಗ್‌ ತಾಕೀತು ಮಾಡಿದರು.

ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ: ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಕುಡಿಯುವ ನೀರಿಗೆ ಯಾವುದೇ ತೊಂದರೆಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಎಲ್ಲಾ ಗ್ರಾಮಗಳಿಗೂ ಪೈಪ್‌ಲೈನ್‌ ಮೂಲಕವೇ ಕುಡಿಯುವ ನೀರು ಪೂರೈಕೆಯಾಗುವಂತೆ ಗಮನ ಹರಿಸಬೇಕು. ಅನಿವಾರ್ಯವಿದ್ದಲ್ಲಿ ಮಾತ್ರ ಟ್ಯಾಂಕರ್‌ ಮೂಲಕ ನೀರು ಪೂರೈಸಿ. ಪ್ರಗತಿಯಲ್ಲಿರುವಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವಿದ್ಯುತ್‌ ಸಂಪರ್ಕ ಒದಗಿಸಿ ಎಂದು ಅವರು ನಿರ್ದೇಶನ ನೀಡಿದರು.

ಕೃಷಿಗೆ ಅಗತ್ಯರುವ ಬಿತ್ತನೆ ಬೀಜ ರಸ ಗೊಬ್ಬರಗಳ ಪೂರೈಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರೆಅರ್ಹರೈತರಿಗೆಪರಿಹಾರವನ್ನು ಶೀಘ್ರವಾಗಿ ವಿತರಣೆ ಮಾಡಿ ಎಂದೂ ಎಂದು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಶೀಘ್ರ ಕೋವಿಡ್ ಲಸಿಕೆ: ಕೋವಿಡ್ ಸೋಂಕು ನಿಯಂತ್ರಣ ಲಸಿಕೆ ಶೀಘ್ರದಲ್ಲೇ ಜಿಲ್ಲೆಗೆ ತಲುಪಬಹುದು. ಅದರ ಶೇಖರಣೆಗೆ ಮತ್ತು ವಿತರಣೆಗಾಗಿ ವ್ಯವಸ್ಥಿತ ಯೋಜನೆ ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ ರಾಜ್‌ಸಿಂಗ್‌ ಜಿಲ್ಲಾಧಿಕಾರಿ ಗಿರೀಶ್‌ ಸೇರಿದಂತೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿ, ಕೋವಿಡ್ ನಿಯಂತ್ರಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಈಗಿನ ಮದುವೆ ಮತ್ತಿತರ ಸಮಾರಂಭದಲ್ಲಿ 200 ಜನರು ಮಾತ್ರ ಸೇರುವ ಅವಕಾಶವಿದ್ದು, ನಿಯಮ ಉಲ್ಲಂಘಿಸಿ ಸಮಾರಂಭ ನಡೆಸುವ ಕಟ್ಟಡದ ಮಾಲಿಕರು ವಧು-ವರರಕುಟುಂಬದ ಮೇಲೆ ದಂಡ ವಿಧಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next