Advertisement

ಮಂಗಳೂರಲ್ಲಿ ಚುನಾವಣಾ ಅಕ್ರಮ ತಡೆಗೆ ಅಧಿಕಾರಿ ನೇಮಕ

05:17 PM Mar 25, 2023 | Team Udayavani |

ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮಂಗಳೂರಿನ ಆದಾಯ ತೆರಿಗೆ ಉಪ ನಿರ್ದೇಶಕ ಮಂಜುನಾಥ್ ಎಚ್.ಎಸ್. ಅವರನ್ನು ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

Advertisement

ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಚುನಾವಣೆಯನ್ನು ಸುಗಮ, ಮುಕ್ತ ಹಾಗೂ ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಇವರು ನಿಗಾ ವಹಿಸಲಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಅಕ್ರಮ ಹಣ ಸಾಗಾಟ, ಅಕ್ರಮ ವಸ್ತುಗಳ ಸಾಗಾಟ ಮತ್ತು ದಾಸ್ತಾನುಗಳು ಹಾಗೂ ಚುನಾವಣಾ ಪ್ರಚೋದನೆಗೆ ಸಂಬಂಧಿಸಿದಂತೆ ಇತರ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ಮಂಜುನಾಥ್ ಎಚ್.ಎಸ್. ಅವರ ಮೊಬೈಲ್ ಸಂಖ್ಯೆ 9353341788 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next