Advertisement

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

10:14 PM May 30, 2024 | Team Udayavani |

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಬದಲು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರಿಗೆ ಪತ್ರ ಬರೆದಿದ್ದಾರೆ.

Advertisement

ತಾವು ಬರೆದ ಪತ್ರದ ಪ್ರತಿಯನ್ನು “ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಯತ್ನಾಳ್‌, ಎಲ್ಲ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ತನ್ನ ಪ್ರಭಾವದ ಮೂಲಕ ಮುಚ್ಚಿ ಹಾಕುವುದು ರಾಜ್ಯ ಸರ್ಕಾರಕ್ಕೆ ಹವ್ಯಾಸವಾಗಿ ಬಿಟ್ಟಿದೆ. ಈ ಪ್ರಕರಣದಲ್ಲಿ ಸಂಪುಟದ ಪ್ರಭಾವಿ ಸಚಿವ ನಾಗೇಂದ್ರ ಭಾಗಿಯಾಗಿರುವುದರಿಂದ ಸಾಕ್ಷಿ ನಾಶಕ್ಕೆ ಆಸ್ಪದವಿದೆ. ಇದರಿಂದ ಸತ್ಯಾಂಶ ಹೊರಬರುವುದಕ್ಕೆ ಸಾಧ್ಯವಿಲ್ಲ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಶಂಕೆಗೆ ದಾರಿ ಮಾಡಿಕೊಟ್ಟ ಅನೇಕ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದ ಅನೇಕ ಪ್ರಕರಣಗಳು ನಮ್ಮ ಮುಂದೆ ಇದೆ. ಡಿವೈಎಸ್‌ಪಿ ಗಣಪತಿ ಪ್ರಕರಣದಲ್ಲೂ ಸಿಬಿಐ ತನಿಖೆ ನಡೆಸಲಾಗಿತ್ತು. ಹೀಗಾಗಿ ಕುಟುಂಬಸ್ಥರಿಗೆ ನ್ಯಾಯ ಕೊಡಿಸಲು ಸಿಬಿಐ ತನಿಖೆ ಸೂಕ್ತ ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next