Advertisement

ರಾಗಿ ಖರೀದಿಸದೇ ಅಧಿಕಾರಿಗಳು ಪರಾರಿ

04:33 PM May 24, 2022 | Team Udayavani |

ನೆಲಮಂಗಲ: ತಾಲೂಕಿನ ರೈತರ ರಾಗಿ ಖರೀದಿ ಮಾಡಬೇಕಾದ ರಾಗಿ ಖರೀದಿ ಕೇಂದ್ರ ಅಧಿಕಾರಿಗಳು ಸೋಮವಾರ ಮಧ್ಯಾಹ್ನದ ವೇಳೆಗೆ ಪರಾರಿಯಾಗಿದ್ದು, ರೈತರು ರಾಗಿ ಮಾರಾಟ ಮಾಡಲುಪರದಾಡುವಂತಾಗಿದ್ದು, ರೈತರ ಹಿಡಿಶಾಪಕ್ಕೆ ಅಧಿಕಾರಿಗಳು ಗುರಿಯಾದ ಘಟನೆಕೆಂಪಲಿಂಗನಹಳ್ಳಿ ಬಳಿಯ ರಾಗಿ ಖರೀದಿ ಕೇಂದ್ರದ ಬಳಿಯಲ್ಲಿ ಸಂಭವಿಸಿದೆ.

Advertisement

ತಾಲೂಕಿನ ಕಳೆದ ಎರೆಡು ದಿನ ರೈತರು ತಮ್ಮ ರಾಗಿಯನ್ನು ರಾಗೀ ಖರೀದಿ ಕೇಂದ್ರಕ್ಕೆ ಮಾರಾಟಕ್ಕೆಂದು ತಂದು ಸರತಿ ಸಾಲಿನಲ್ಲಿನಿಂತಿದ್ದರು. ಮಧ್ಯಾಹ್ನವಾದರೂ ರಾಗಿಖರೀದಿ ಕೇಂದ್ರದ ಚಟುವಟಿಕೆ ಪ್ರಾರಂಭವಾಗದ ಹಿನ್ನೆಲೆ ಕಾಯ್ದು ಕಾಯ್ದುಕೋಪಗೊಂಡಿದ್ದ ರೈತರು ಅಧಿಕಾರಿಗಳುನ್ನು ತರಾಟೆಗೆ ತೆಗೆದುಕೊಂಡರು.

ಕ್ರಮ ಜರುಗಿಸಲು ಒತ್ತಾಯ: ಈ ವೇಳೆ ಸ್ಥಳದಲ್ಲಿದ್ದ ಕೇಂದ್ರದ ಅಧಿಕಾರಿಗಳು ರಾಗಿ ಖರೀದಿ ಮತ್ತು ಸಾಗಾಣಿಕೆಯ ಗುತ್ತಿಗೆ ಪಡೆದುಕೊಂಡಿರುವ ಗುತ್ತಿಗೆದಾರರು ಸೋಮವಾರ ರಾಗಿ ಸಾಗಣೆ ಮಾಡಲು ಲಾರಿಗಳನ್ನು ಕಳುಹಿಸಿಲ್ಲ ಎಂದು ಸಬೂಬು ಹೇಳಿದ್ದಾರೆ. ಅಧಿಕಾರಿಗಳ ಉತ್ತರದಿಂದ ಆಕ್ರೋಶಗೊಂಡ ರೈತರು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗದುಕೊಳ್ಳುತಿದ್ದಂತೆ ಅಧಿಕಾರಿಗಳು ತಮ್ಮ ಕಾಲಿಗೆ ಬುದ್ಧಿ ಹೇಳಿದ್ದಾರೆ.

ರೈತರ ಸಮಸ್ಯೆಗಳನ್ನು ಮೇಲಧಿಕಾರಿಗಳ ಗಮನಕ್ಕೆತಂದು ಸಮಸ್ಯೆ ಬಗೆಹರಿಸದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಜರುಗಿಸಬೇಕೆಂದು ರಾಗಿ ಮಾರಾಟ ಮಾಡಲು ಬಂದಿದ್ದ ರೈತರು ಆಗ್ರಹಿಸಿದ್ದಾರೆ.

ಬಡ ರೈತರಿಗೆ ಅನ್ಯಾಯ: ಭಾರತೀಯ ಕಿಸಾನ್‌ ಸಂಘದ ರಾಜ್ಯ ಪ್ರದಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್‌ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ ಬೆಂಬಲವ್ಯಕ್ತಪಡಿಸಿ ಮಾತನಾಡಿದ ಅವರು, ಕಳೆದೆರೆಡು ದಿನಗಳಿಂದ ಕಾಯ್ದು ಕುಳಿತಿದ್ದ ರೈತರನ್ನುಕೈಬಿಟ್ಟು ಲಂಚ ನೀಡಿದ ಕೆಲವೇ ರೈತರಿಗೆ ಟೋಕನ್‌ ನೀಡಿ ಅವರನ್ನು ದೊಡ್ಡಬಳ್ಳಾಪುರಕ್ಕೆಕಳುಹಿಸಿ ಕೊಡಲಾಗಿದೆ. ಇದರಿಂದ ಬಡ ರೈತರಿಗೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿಸರ್ಕಾರ ಸತ್ತು ಹೋಗಿದೆ. ಸಚಿವರುಗಳುಎಲ್ಲಿಗೆ ಹೋಗಿದ್ದಾರೆಂಬುದು ಗೊತ್ತಿಲ್ಲ,ಅವರಿಗೆ ರೈತರ ಸಮಸ್ಯೆ ಆಲಿಸಿ ಬಗೆಹರಿಸುವ ಮನಸ್ಥಿತಿಯಿಲ್ಲ ಎಂದರು.

Advertisement

ಹೋರಾಟದ ಎಚ್ಚರಿಕೆ : ಆಡಳಿತ ನಡೆಸುವವರು ಮೈಮರೆತು ಕುಳಿತಂತಿದೆ. ರೈತರ ಕಷ್ಟವನ್ನುಬಗೆಹರಿಸುತ್ತೇವೆಂದು ರೈತರ ಹೆಸರಿನಲ್ಲಿಅಧಿಕಾರಕ್ಕೆ ಬರುವವರು ತಮ್ಮ ಸ್ವಂತಹಿತಾಸಕ್ತಿಯನ್ನು ಕಾಯ್ದುಕೊಳ್ಳುತ್ತಿದ್ದಾರೆ.ಈ ಸಮಸ್ಯೆ ಪರಿಹರಿಸಲು ಸ್ಥಳೀಯತಾಲೂಕು ಆಡಳಿತ ಮುಂದಾಗಬೇಕು.ಇಲ್ಲವಾದಲ್ಲಿ ರೈತರು ಹೋರಾಟಕ್ಕೆಮುಂದಾಗಬೇಕಾಗುತ್ತದೆ ಎಂದುಭಾರತೀಯ ಕಿಸಾನ್‌ ಸಂಘದ ರಾಜ್ಯಪ್ರದಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್‌ ಎಚ್ಚರಿಕೆಯನ್ನು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next