Advertisement

ಜನಜೀವನಕ್ಕೆ ಸಮಸ್ಯೆ ಆಗಬಾರದು

03:14 PM Apr 07, 2020 | Suhan S |

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ತಡೆಗಾಗಿ ಲಾಕ್‌ಡೌನ್‌ ಮಾಡಿರುವ ಕಾರಣ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಹಾಲು, ಪಡಿತರ ವಿತರಣೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌ ಸೂಚನೆ ನೀಡಿದರು.

Advertisement

ನಗರದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತಾನಾಡಿದ ಅವರು, ಕೊಳಚೆ ಪ್ರದೇಶದ ನಿವಾಸಿಗಳು ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಮನೆ ಬಾಗಿಲು, ಆಶ್ರಯ ತಾಣಗಳಿಗೇ ನೇರವಾಗಿ ತಲುಪಿಸಬೇಕು. ಪಡಿತರದಾರರಿಗೆ ಎರಡು ತಿಂಗಳ ಪಡಿತರ ಪದಾರ್ಥ ಮುಂಗಡವಾಗಿ ನೀಡಲಾಗುತ್ತಿದೆ. ಇದನ್ನು ಪಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಬೇಕು ಎಂದರು.

ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಪರಿಕರಗಳಿಗೆ ಕೊರತೆಯಾಗ ಬಾರದು. ತೋಟಗಾರಿಕೆ, ಕೃಷಿ ಉತ್ಪನ್ನಗಳ ಮಾರಾಟ ಸಾಗಣೆಗೆ ಯಾವುದೇ ಅಡಚಣೆಯಾಗದಂತೆ ನೋಡಿ ಕೊಳ್ಳಬೇಕು, ರಸ ಗೊಬ್ಬರ ಕೃಷಿ ಪರಿಕರಗಳ ಅಂಗಡಿ ತೆರೆಯಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಮಾತನಾಡಿ, ಕೃಷಿ ಪರಿಕರಗಳ ಅಂಗಡಿ ತೆರೆಯಲು ಪ್ರಸ್ತುತ ಬೆಳಗ್ಗೆ ಯಿಂದ ಮಧ್ಯಾಹ್ನದವರೆಗೆ ಕಾಲಾವಕಾಶ ನೀಡಲಾಗಿದೆ. ಅಗತ್ಯ ಬೇಡಿಕೆ ಇದ್ದರೆ ಸಮಯ ವಿಸ್ತರಿಸಲು ಕ್ರಮ ತೆಗೆದುಕೊಳ್ಳ ಲಾಗುತ್ತದೆ ಎಂದರು. ಶಾಸಕರಾದ ಮಹೇಶ್‌, ನಿರಂಜನ್‌ ಕುಮಾರ್‌ ಮಾತನಾಡಿ ಹಾಲು ವಿತರಣೆ ಸಮರ್ಪಕವಾಗಿ ನಡೆಯಬೇಕು, ಅಕ್ರಮ ಮದ್ಯ ಮಾರಾಟವಾಗದಂತೆ ನಿಗಾವಹಿಸಬೇಕು ಎಂದರು. ಸಭೆಯಲ್ಲಿ ಎಡೀಸಿ ಆನಂದ್‌, ಎಎಸ್ಪಿ ಅನಿತಾ, ಮೆಡಿ ಕಲ್‌ ಕಾಲೇಜ್‌ ಡೀನ್‌ ಡಾ. ಸಂಜೀವ್‌, ಡಿಎಚ್‌ಓ ಡಾ. ಎಂ.ಸಿ.ರವಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next