Advertisement

ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಅಧಿಕಾರಿಗಳ ದಾಳಿ

02:47 PM May 29, 2022 | Shwetha M |

ವಿಜಯಪುರ: ವಿಜಯಪುರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಕವಿತಾ ದೊಡಮನಿ ಮಾರ್ಗದರ್ಶನದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಿಲ್ಲಾ ತಂಬಾಕು ತನಿಖಾ ದಳದ ಸದಸ್ಯರು ಕೊಟ್ಫಾ 2003 ಕಾಯ್ದೆಯಡಿ ನಗರದ ವಿವಿಧೆಡೆ ದಾಳಿ ನಡೆಸಿದರು.

Advertisement

ನಗರದ ಕೇಂದ್ರ ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿ ಮಾರ್ಗದಲ್ಲಿ ಬರುವಂತಹ ವಿವಿಧ ಪಾನ್‌ ಶಾಪ್‌ಗ್ಳಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದರು. ದಾಳಿಯಲ್ಲಿ ಸಾರ್ವಜನಿಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ, ವ್ಯಾಪಾರಸ್ಥರಿಗೆ ಕೊಟ್ಫಾ 2003 ಕಾಯ್ದೆಯಡಿ ಒಟ್ಟು 49 ಪ್ರಕರಣಗಳನ್ನು ದಾಖಲಿಸಿ 4500 ರೂ.ದಂಡ ವಸೂಲು ಮಾಡಲಾಯಿತು.

ತಂಬಾಕು ಉತ್ಪನ್ನಗಳ ಜಾಹೀರಾತು ಫಲಕ ತೆರವುಗೊಳಿಸಿ, ತಂಬಾಕು ನಿಯಂತ್ರಣ ನಿಯಮಗಳ ಕುರಿತು ನಾಮಫಲಕಗಳನ್ನು ಅಳವಡಿಸಲಾಯಿತು. ದಾಳಿಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕದ ಮಹಾಂತೇಶ ಉಳ್ಳಾಗಡ್ಡಿ, ಗಾಂಧಿ ಚೌಕ್‌ ಪೊಲೀಸ್‌ ಠಾಣೆ ಸಿಬ್ಬಂದಿ, ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಡಾ| ಪ್ರಕಾಶ ಚವ್ಹಾಣ, ಶ್ರೀಕಾಂತ ಪೂಜಾರ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next