Advertisement

ಅಕ್ರಮ ಮರಳು ದಾಸ್ತಾನು ಘಟಕಕ್ಕೆ ಅಧಿಕಾರಿಗಳ ದಾಳಿ : ಲಕ್ಷಾಂತರ ರೂ. ಮೌಲ್ಯದ ಮರಳು ವಶಕ್ಕೆ

04:43 PM Dec 29, 2020 | Team Udayavani |

ಹುಬ್ಬಳ್ಳಿ: ಅಕ್ರಮ ಮರಳು ದಾಸ್ತಾನು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ಪೊಲೀಸ್ ಇಲಾಖೆಯಿಂದ ಜಂಟಿ ದಾಳಿ ನಡೆಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮರಳು ಜಪ್ತಿ ಮಾಡಿದ ಘಟನೆ ಗಬ್ಬೂರು ಬಳಿ ಮಂಗಳವಾರ ನಡೆದಿದೆ.

Advertisement

ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಜಂಟಿ ದಾಳಿ ಮಾಡಲಾಗಿದ್ದು, ಅಪಾರ ಪ್ರಮಾಣದ ಮರಳು ಪತ್ತೆಯಾಗಿದೆ.

ವಶಪಡಿಸಿಕೊಂಡ ಮರಳಿನ ಮೌಲ್ಯದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ, ದಾಸ್ತಾನು ಮಾಡಿರುವ ಮರಳು ಎಲ್ಲಿಂದ ತರಲಾಗಿದೆ ಎನ್ನುವ ಕುರಿತು ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಪತ್ತೆಯಾಗಿರುವ ಮರಳನ್ನು ಸರಕಾರಿ ಕಾರ್ಯಕ್ಕೆ ಬಳಸಿಕೊಳ್ಳುವ ಕುರಿತು ನಿರ್ಧರಿಸಲಾಗಿದ್ದು, ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ನಿರ್ಮಿತ ಕೇಂದ್ರಕ್ಕೆ ಮರಳು ಸಾಗಿಸಲಾಗುತ್ತಿದೆ. ಈ ಪ್ರಕ್ರಿಯೆ ಮುಗಿದ ನಂತರ ಮೌಲ್ಯ ನಿರ್ಧರಿಸಲಾಗುವುದು ಎಂದು ಹಿರಿಯ ಭೂ ವಿಜ್ಞಾನಿ ಚಂದ್ರಶೇಖರ ತಿಳಿಸಿದ್ದಾರೆ

ಇದನ್ನೂ ಓದಿ:ಗುಜರಾತ್: ಆರು ಬಾರಿ ಸಂಸದ, ಮಾಜಿ ಸಚಿವ ಎಂಬಿ ವಾಸವ್ ಬಿಜೆಪಿಗೆ ರಾಜೀನಾಮೆ

Advertisement

Udayavani is now on Telegram. Click here to join our channel and stay updated with the latest news.

Next