Advertisement

ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಅಧಿಕಾರಿಗಳ ತಡೆ ಖಂಡಿಸಿ ಕತ್ತು ಕೊಯ್ದುಕೊಂಡ ಯುವಕ!

03:08 PM Dec 04, 2021 | Team Udayavani |

ಮೈಸೂರು: ಇಲ್ಲಿನ ಪಡುವಾರಹಳ್ಳಿಯ ಮಾತೃ ಮಂಡಳಿ ವೃತ್ತದಲ್ಲಿ ಅನುಮತಿ ಇಲ್ಲದೆ ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲು ಮುಂದಾದ ಯುವಕರನ್ನು ಅಧಿಕಾರಿಗಳು ತಡೆದ ಘಟನೆ ನಡೆದಿದೆ.

Advertisement

ಅನುಮತಿ ಇಲ್ಲದೆ ಪ್ರತಿಮೆ ನಿರ್ಮಾಣ ಮಾಡುವುದನ್ನು ಪೊಲೀಸರು ತಡೆದಿದ್ದು, ಮಹಾನಗರ ಪಾಲಿಕೆ ಸಿಬ್ಬಂದಿಗಳು ಪ್ರತಿಮೆಯನ್ನು ವಶಕ್ಕೆ ಪಡೆದರು. ಇದನ್ನು ಖಂಡಿಸಿ ಪಡುವಾರಹಳ್ಳಿಯ ನಿವಾಸಿ ಸತೀಶ್ (29 ವ) ಕತ್ತು ಕೊಯ್ದುಕೊಂಡ ಪ್ರಸಂಗ ನಡೆಯಿತು. ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ:ಶಿವರಾಮ್ ನಟರಷ್ಟೇ ಅಲ್ಲ, ಸ್ಟಾರ್ ನಟರ ಸಿನಿಮಾ ನಿರ್ಮಾಪಕ, ನಿರ್ದೇಶಕರೂ ಆಗಿ ಮನಗೆದ್ದಿದ್ರು…

ಕಾಂಗ್ರೆಸ್ ವಿರೋಧ: ಪಡುವಾರಹಳ್ಳಿಯ ಮಾತೃ ಮಂಡಳಿ ವೃತ್ತದಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿರುವುದನ್ನು ಖಂಡಿಸುತ್ತೇವೆ. ಈ ಬೆಳವಣಿಗೆ ಬಿಜೆಪಿಯ ದಲಿತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ. ಸರ್ಕಾರದ ಅಧಿಕಾರಿಗಳು ಬಲವಂತವಾಗಿ ಅಂಬೇಡ್ಕರ್ ಪ್ರತಿಮೆಯನ್ನು ತೆರವು ಮಾಡಿರುವುದು ಸರಿಯಲ್ಲ‌. ಪ್ರತಿಮೆಯನ್ನು ಪುನರ್ ಸ್ಥಾಪಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಉಗ್ರ ಪ್ರತಿಭಟನೆ ‌‌‌ನಡೆಸಲಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next