Advertisement

ಅಧಿಕಾರಿಗಳು ಕಡ್ಡಾಯ ಹಾಜರಾಗಲು ತಾಕೀತು

01:01 PM Oct 14, 2021 | Team Udayavani |

ದೇವದುರ್ಗ: ತಾಲೂಕಿನ ಕ್ಯಾದಿಗೇರಾ ಗ್ರಾಮದಲ್ಲಿ ಅ.16ರಂದು ನಡೆಯಲ್ಲಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯ ಹಾಜರು ಇರಬೇಕು ಎಂದು ಪ್ರಭಾರ ತಹಶೀಲ್ದಾರ್‌ ಶ್ರೀನಿವಾಸ ಚಾಪಲ್‌ ತಾಕೀತು ಮಾಡಿದರು.

Advertisement

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನೆಪಹೇಳಿ ಅಧಿಕಾರಿಗಳು ಆಗಮಿಸದ ಇದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಪಿಡಿಒ ಸಿ.ಬಿ. ಪಾಟೀಲ್‌ ಮಾತನಾಡಿದರು. ಶಾಲಾ ಮಕ್ಕಳಿಂದ ಸಂಜೆ ಸಂಸ್ಕೃತಿ ಕಾರ್ಯಕ್ರಮ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿ ಕಾರಿ ಆರ್‌.ಇಂದಿರಾ ಅವರಿಗೆ ಸೂಚಿಸಿದರು. ಬಿಗಿ ಪೊಲೀಸ್‌ ಬಂದೋಬಸ್ತ್, ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು ಹಾಜರು ಇರಬೇಕು ಎಂದು ಸಿಡಿಪಿಓ ವೆಂಕಟಪ್ಪ ಅವರಿಗೆ ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐ ಆರ್‌. ಎಂ. ನದಾಫ್‌, ತಾಪಂ ಇಒ ಪಂಪಾಪತಿ ಹಿರೇಮಠ, ಪರಿಶಿಷ್ಟ ಪಂಗಡ ಅ ಧಿಕಾರಿ ರಾಘವೇಂದ್ರ, ಸಮಾಜ ಕಲ್ಯಾಣಾಧಿಕಾರಿ ದೇವರಾಜ, ತೋಟಗಾರಿ ನಿರ್ದೇಶಕ ಭೀಮರಾವ್‌ ಕುಂಬಾರ ಸೇರಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next