Advertisement

ಬಂಟ್ವಾಳ: ಅಕ್ರಮ ಮರಳುಗಾರಿಕಾ ಅಡ್ಡೆಗೆ  ದಾಳಿ; ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ

08:02 PM Feb 15, 2022 | Team Udayavani |

ಬಂಟ್ವಾಳ: ಅಕ್ರಮ ಮರಳುಗಾರಿಕಾ ಅಡ್ಡೆಗೆ  ಗಣಿ ಇಲಾಖಾ ತಂಡ ದಾಳಿ ನಡೆಸಿರುವ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರುನಲ್ಲಿ ಮಂಗಳವಾರ ನಡೆದಿದೆ.

Advertisement

ಗಣಿ ಇಲಾಖಾ ತಂಡ ದಾಳಿ ನಡೆಸಿ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸುವ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ದಾಳಿಯಲ್ಲಿ ಮೂರು ಬೋಟ್ ಹಾಗೂ ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಕಂದಾಯ ನಿರೀಕ್ಷಕ ಚೆನ್ನಬಸಪ್ಪ , ಗಣಿ ಇಲಾಖೆಯ ಅಧಿಕಾರಿ ಮಹಾದೇಶ್ವರ, ಪಿ.ಡಿ.ಒ. ಗ್ರಾಮಾಂತರ ಎಸ್‌ಐ ಹರೀಶ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next