Advertisement

BJP ತೈಲದರ ಇಳಿಕೆಗೆ ಪಟ್ಟು: ಇಂದು ರಸ್ತೆ ತಡೆ

12:47 AM Jun 20, 2024 | Team Udayavani |

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಸಂಬಂಧ ರಾಜ್ಯ ಸರಕಾರದ ವಿರುದ್ಧ ತಿರುಗಿಬಿದ್ದಿರುವ ರಾಜ್ಯ ಬಿಜೆಪಿಯು ಉಗ್ರ ಪ್ರತಿಭಟನೆಗೆ ಮುಂದಾಗಿದೆ.

Advertisement

ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ಎರಡನೇ ಹಂತದ ಹೋರಾಟಕ್ಕೆ ಸಿದ್ಧವಾಗಿದ್ದು, ಗುರುವಾರ ರಾಜ್ಯಾದ್ಯಂತ ರಸ್ತೆ ತಡೆ ಹಾಗೂ ಬೆಂಗಳೂರಿನಲ್ಲಿ ಸೈಕಲ್‌ ಜಾಥಾ ನಡೆಸಲಿದೆ.

ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ತಡೆ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ ನಡೆಸಲಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಡಿಸಿಎಂ ಡಾ| ಸಿ.ಎನ್‌. ಅಶ್ವತ್ಥನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌, ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ.

ಸುಮಾರು 250ರಿಂದ 300 ಸೈಕಲ್‌ಗ‌ಳಲ್ಲಿ ಕಾರ್ಯಕರ್ತರು ಜಾಥಾದಲ್ಲಿ ಭಾಗವಹಿಸಲಿದ್ದಾರೆ.

ಸರಕಾರದಿಂದ ತೆರಿಗೆ ಹೆಚ್ಚಳ ಅಭಿಯಾನ
ಈ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎನ್‌. ರವಿಕುಮಾರ್‌, ರಾಜ್ಯದಲ್ಲಿ ತೆರಿಗೆ ಹೆಚ್ಚಿಸುವ ಅಭಿಯಾನವನ್ನೇ ರಾಜ್ಯ ಸರಕಾರ ಕೈಗೆತ್ತಿಕೊಂಡಿದೆ. ಇದರ ವಿರುದ್ಧ ಗುರುವಾರ ರಸ್ತೆ ತಡೆ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

Advertisement

ಜನರಿಗೆ ತೊಂದರೆ ಆದರೆ ಲಾಠಿಚಾರ್ಜ್‌
ಬೆಂಗಳೂರು: “ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ಅದರಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಬಿಡುವುದಿಲ್ಲ. ಕಾನೂನು ಕ್ರಮ ಅನಿವಾರ್ಯ ಆಗಲಿದೆ’ ಎಂದು ಗೃಹ ಸಚಿವ ಡಾ| ಪರಮೇಶ್ವರ್‌ ಎಚ್ಚರಿಸಿದರು. “ಲಾಠಿ ಚಾರ್ಜ್‌ ಮಾಡುವ ಅಗತ್ಯಬಿದ್ದರೆ ಅದನ್ನೂ ಮಾಡುತ್ತೇವೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next