Advertisement

ಒಖೀ ಬಳಿಕ ಮತ್ತೊಂದು ಚಂಡಮಾರುತದ ಭೀತಿ

06:00 AM Dec 04, 2017 | Team Udayavani |

ಭುವನೇಶ್ವರ: ಒಖೀ ಚಂಡಮಾರುತದ ಅಬ್ಬರದಿಂದ ಚೇತರಿಸಿ ಕೊಳ್ಳುತ್ತಿದ್ದಂತೆ ಕರಾವಳಿ ಭಾಗದ ಜನರಿಗೆ ಮತ್ತೂಂದು ಆಘಾತ ಎದುರಾ ಗುವ ಎಲ್ಲ ಲಕ್ಷಣಗಳು ಗೋಚರಿಸಿವೆ. 

Advertisement

ಬಂಗಾಲ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯೂ ಇದೆ. ಉತ್ತರ ಸುಮಾತ್ರಾ ಕರಾವಳಿ, ದಕ್ಷಿಣ ಅಂಡಮಾನ್‌ ಸಮುದ್ರದ ಸಮೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಡಿ.7ರಿಂದ ಒಡಿಶಾ, ತಮಿಳುನಾಡು, ಆಂಧ್ರ, ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೆರಡು ದಿನಗಳಲ್ಲಿ ಈ ವಾಯುಭಾರ ಕುಸಿತದ ತೀವ್ರತೆ ಹೆಚ್ಚಲಿದ್ದು, ಅದು ಉತ್ತರ ತಮಿಳುನಾಡು ಹಾಗೂ ಆಂಧ್ರಪ್ರದೇಶ ದಕ್ಷಿಣ ಕರಾವಳಿಯತ್ತ ಸಂಚರಿಸಲಿದೆ. ಒಡಿಶಾದ ಸುಮಾರು 18 ಜಿಲ್ಲೆಗಳಲ್ಲಂತೂ ಡಿ. 7, 8 ಹಾಗೂ 9ರಂದು ಧಾರಾಕಾರ ಮಳೆಯಾಗಲಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಮಾಹಿತಿ ಹೊರಬೀಳುತ್ತಿದ್ದಂತೆ, ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಒಡಿಶಾ ಸರಕಾರ ಸಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next