Advertisement

ಒಳಮೀಸಲು: ಶೀಘ್ರ ಕೇಂದ್ರಕ್ಕೆ ಪ್ರಸ್ತಾಪ ಕಳುಹಿಸಲು ಬಿಜೆಪಿ ಸಿದ್ದತೆ

11:33 AM Dec 17, 2022 | Team Udayavani |

ಬೆಂಗಳೂರು: ಒಳಮೀಸಲು ವಿಚಾರಕ್ಕೆ ಸಂಬಂಧಪಟ್ಟಂತೆ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಅತಿ ಶೀಘ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳುಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ತೀರ್ಮಾನಿಸಿದೆ.

Advertisement

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ನಾರಾಯಣ ಸ್ವಾಮಿ ಶುಕ್ರವಾರ ಸಂಘ-ಪರಿವಾರದ ಹಿರಿಯರನ್ನು ಭೇಟಿ ಮಾಡಿ ಮಾತಿಕತೆ ನಡೆಸಿದ್ದು, ಒಳಮೀಸಲು ಜಾರಿ ಅನಿವಾರ್ಯ ಎಂದು ಪ್ರತಿಪಾದಿಸಿದ್ದಾರೆ ಎಂದು ತಿಳಿದು ಬಂದಿದೆ. ಜತೆಗೆ ಪಕ್ಷದ ವತಿಯಿಂದ ಒಳಮೀಸಲು ಪ್ರಸ್ತಾಪವನ್ನು ಆದಷ್ಟು ಶೀಘ್ರ ಜಾರಿ ಮಾಡಲು ಕೇಂದ್ರಕ್ಕೆ ಪ್ರಸ್ತಾಪ ಕಳುಹಿಸುವಂತೆ ನಿರ್ದೇಶನ ನೀಡಲಾಗಿದೆ.

ಈ ವಿಚಾರವನ್ನು ಸಂಘ-ಪರಿವಾರದ ನಾಯಕರೇ ಪ್ರಧಾನವಾಗಿ ಪರಿಗಣಿಸಿದ್ದಾರೆ. ಹೀಗಾಗಿ ರಾಜಕೀಯ ನಿರ್ಣಯ ತೆಗೆದುಕೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗಿ ಪರಿಣಮಿಸಿದೆ. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಈಗಾಗಲೇ ಸರ್ಕಾರ ಸಂಪುಟ ಉಪಸಮಿತಿ ರಚನೆ ಮಾಡಿದ್ದು, ಮೀಸಲು ಹಂಚಿಕೆ ವಿಧಾನವನ್ನು ಇದು ನಿರ್ಧರಿಸಲಿದೆ.

ಇದನ್ನೂ ಓದಿ:ಬಿಲಾವ್‌ ಭುಟ್ಟೋ ಹೇಳಿಕೆಯಿಂದ ಪಾಕ್ ಕೀಳು ಮನಸ್ಥಿತಿ ಬಯಲಾಗಿದೆ: ಯಡಿಯೂರಪ್ಪ

ಈ ಮೊದಲು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಗೆ ಶೇ.15ರಷ್ಟು ಮೀಸಲು ಇತ್ತು. ಆದರೆ ರಾಜ್ಯ ಸರ್ಕಾರ ಆ ಮಿತಿಯನ್ನು ಈಗಾಗಲೇ ಶೇ.17ಕ್ಕೆ ಹೆಚ್ಚಳ ಮಾಡಿದೆ. ಹೀಗಾಗಿ ಹೆಚ್ಚುವರಿಯಾದ ಮೀಸಲು ಪ್ರಮಾಣಕ್ಕೆ ಅನುಗುಣವಾಗಿ ಒಳಮೀಸಲು ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜನವರಿ ತಿಂಗಳಲ್ಲಿ ಸರ್ಕಾರಕ್ಕೆ ಪ್ರಸ್ತಾಪ ರವಾನೆಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next