Advertisement

ಹಳೇ ದ್ವೇಷ: ರೌಡಿಶೀಟರ್‌ ಹತ್ಯೆ

05:41 AM Jun 28, 2020 | Lakshmi GovindaRaj |

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ವೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆಗೈದಿರುವ ಘಟನೆ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಜಾಲ ನಿವಾಸಿ ಸುಬ್ರಹ್ಮಣ್ಯ (30) ಕೊಲೆಯಾದ  ರೌಡಿಶೀಟರ್‌. ಶುಕ್ರವಾರ ಸಂಜೆ ಆರು ಗಂಟೆ ಸುಮಾರಿಗೆ ಮೀನುಕುಂಟೆ ಹೊಸೂರು ಗ್ರಾಮಕ್ಕೆ ಸುಬ್ರಹ್ಮಣ್ಯ ಹೋಗಿದ್ದ.

Advertisement

ಅದೇ ವೇಳೆ ಆತನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಐದಾರು ಮಂದಿ ದುಷ್ಕರ್ಮಿಗಳು, ಏಕಾಏಕಿ  ಮಾರಕಾಸ್ತ್ರಗಳಿಂ  ದ ಹಲ್ಲೆ ನಡೆಸಿ ಪರಾರಿ ಯಾಗಿದ್ದಾರೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಬ್ರಹ್ಮಣ್ಯ  ನನ್ನು ಕೂಡಲೇ, ಸ್ಥಳೀಯ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿರ ಮಧ್ಯಾಹ್ನ ಮೃತಪಟ್ಟಿದ್ದಾನೆ ಎಂದು ಪೊಲೀಸರು  ಹೇಳಿದರು. ಸುಬ್ರಹ್ಮಣ್ಯ ವಿರುದ್ಧ ಚಿಕ್ಕಜಾಲ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದ್ದು,

ಈತನ ವಿರುದ್ಧ ಕೊಲೆ, ದರೋಡೆ ಸೇರಿ ಹತ್ತಕ್ಕೂ ಹೆಚ್ಚು ಪ್ರಕರಣ ಗಳಿದ್ದು, ಜೈಲು ಸೇರಿದ್ದ. ಇತ್ತೀಚೆಗೆ ಬಿಡುಗಡೆ ಹೊಂದಿ ಕೆಲ ಯುವಕರ ಜತೆ ಗಲಾಟೆ  ಮಾಡಿಕೊಂಡಿದ್ದ. ಅದೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಸಂಚು ರೂಪಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದರು. ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next