Advertisement

ನದಿಗೆ ಹಾರಿದ್ದ ವೃದ್ಧೆಯ ರಕ್ಷಿಸಿದ ಅಂಬಿಗ

10:01 AM Sep 13, 2019 | Team Udayavani |

ಸವಣೂರು: ಆತ್ಮಹತ್ಯೆ ಮಾಡಲೆಂದು ನದಿ ನೀರಿಗೆ ಹಾರಿದ ಮಹಿಳೆಯನ್ನು ನೀರಿನಿಂದ ಮೇಲೆತ್ತಿ ರಕ್ಷಿಸಿದ ಘಟನೆ ಗುರುವಾರ ಬೆಳಿಗ್ಗೆ ಕಡೇಶಿವಾಲಯದಲ್ಲಿ ನಡೆದಿದೆ.

Advertisement

ಕಡಬ ತಾಲೂಕಿನ ರಾಮಕುಂಜ ನಿವಾಸಿ ಮಂಜಕ್ಕ ಎಂಬ ವೃದ್ದೆ ಆತ್ಮಹತ್ಯೆ ಮಾಡಲೆಂದು ಉಪ್ಪಿನಂಗಡಿ ಸಮೀಪ ನದಿಗೆ ಹಾರಿದವರು.

ಕಡೇಶಿವಾಲಯ ಸಮೀಪ ನದಿ ನೀರಿನ ಸೆಳೆತಕ್ಕೆ ಮಂಜಕ್ಕ ಕೊಚ್ಚಿಕೊಂಡು ಹೋಗುತ್ತಿರುವುದನ್ನು ಅಲ್ಲಿನ ಅಂಬಿಗರೋರ್ವರು ನೋಡಿದ್ದಾರೆ. ತಕ್ಷಣವೇ ವೃದ್ದೆಯನ್ನು ರಕ್ಷಿಸಲೆಂದು ತೆರಳಿದಾಗ ತಾನು ಆತ್ಮಹತ್ಯೆ‌ ಮಾಡಲೆಂದು ನದಿಗೆ ಹಾರಿದ್ದು, ನನ್ನನ್ನು ರಕ್ಷಿಸಬೇಡಿ ಎಂದು ವೃದ್ದೆ ಸೂಚಿಸಿದ್ದಾರೆ. ಆದರೂ ಅಂಬಿಗ ಅಬ್ಬಾಸ್ ವೃದ್ದೆಯನ್ನು ನೀರಿನಿಂದ ಮೇಲೆತ್ತಿ ರಕ್ಷಿಸಿದ್ದಾರೆ. ವೃದ್ದ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆಕೆಯ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next