Advertisement
ಈ ಟ್ವೀಟ್ಗೆ ಸಾಮಾಜಿಕ ಜಾಲತಾಣ ಮತ್ತು ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್ನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಪ್ರಧಾನಿ, ದಕ್ಷಿಣ ಭಾರತದ ಹಿರಿಯ ಮುತ್ಸದ್ದಿಯೊಬ್ಬರಿಗೆ ಹೀಯಾಳಿಕೆ ಮಾಡಿದ್ದನ್ನು ಹಲವಾರು ಮಂದಿ ಖಂಡಿಸಿದ್ದಾರೆ. ಕರ್ನಾಟಕದ ಬಿಜೆಪಿ ನಾಯಕ, ಶಾಸಕ ಸಿ.ಟಿ.ರವಿ ಕೂಡ ಒಮರ್ ಹೇಳಿಕೆಯನ್ನು ಪ್ರಬಲವಾಗಿ ಖಂಡಿಸಿದ್ದಾರೆ. ಕರ್ನಾಟಕ ಮತ್ತು ದೇಶಕ್ಕೆ ದೇವೇಗೌಡರ ಕುಟುಂಬ ನೀಡಿದ ಕೊಡುಗೆ ನಿಮ್ಮ ಕುಟುಂಬ ನೀಡಿದ ಕೊಡುಗೆಗಿಂತಲೂ ಮಿಗಿಲಾಗಿದೆ. ಅದಕ್ಕಾಗಿಯೇ ಅವರನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತಿದೆ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಗಲ್ಲು ಶಿಕ್ಷೆಗೆ ಗುರಿಯಾಗಿರುವ ನೌಕಾಪಡೆ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಬಗ್ಗೆ ಚಾನಲ್ಗಳು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜ.ಮುಷರ್ರಫ್ ಜತೆ ಮಾತನಾಡುವುದು ಮತ್ತು ಭಾರತದ ಬೆಳವಣಿಗೆಗಳ ಜತೆಗೆ ಮಾಜಿ ಪ್ರಧಾನಿ ದೇವೇಗೌಡರ ಜತೆ ಮಾತನಾಡುವುದು ಎರಡೂ ಒಂದೇ. ಏಕೆಂದರೆ ಇಬ್ಬರೂ ಮಾಜಿಗಳು.
Related Articles
ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್ನಲ್ಲಿ ಒಮರ್ ಅಬ್ದುಲ್ಲಾ ವಿರುದ್ಧ 2 ದಿನಗಳಿಂದ ಟೀಕಾ ಪ್ರಹಾರ ನಡೆಸುತ್ತಿರುವ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿಚಾರವನ್ನು ಇನ್ನಷ್ಟು ಎಳೆದಾಡುವುದು ಬೇಡ ಎಂದಿದ್ದಾರೆ. ಈ ಬಗ್ಗೆ ಪಕ್ಷದ ವಕ್ತಾರ ಕುನ್ವರ್ ಡ್ಯಾನಿಷ್ ಅಲಿ ಮಾಹಿತಿ ನೀಡಿದ್ದಾರೆ. ದೇವೇಗೌಡರ ಬಗ್ಗೆ ಮಾತನಾಡುವವರ ಸಾಮರ್ಥ್ಯದ ಬಗ್ಗೆ ಜನರೇ ನಿರ್ಧರಿಸಲಿದ್ದಾರೆ ಎಂದಿದ್ದಾರೆ. ‘ಒಮರ್ ಲಂಡನ್ನಲ್ಲಿ ಶಿಕ್ಷಣ ಪಡೆದವರು. ಅವರು ತಮ್ಮ ಜ್ಞಾನವನ್ನು ಮತ್ತೂಬ್ಬರನ್ನು ಹೀಯಾಳಿಸಲು ಬಳಸಬಹುದು. ನಮ್ಮ ನಾಯಕ ಗ್ರಾಮೀಣ ಹಿನ್ನೆಲೆಯಿಂದ ಬಂದವರು. ಹೀಗಾಗಿ ಈ ವಿಚಾರದ ಬಗ್ಗೆ ಮಾತನಾಡದಿರಲು ತೀರ್ಮಾನಿಸಿದ್ದೇವೆ’ ಎಂದಿದ್ದಾರೆ.
Advertisement