Advertisement

ಡಿ. 31ಕ್ಕೆ ಒಂಬತ್ತನೇ ದಿಕ್ಕು

11:13 AM Dec 03, 2021 | Team Udayavani |

ದಯಾಳ್‌ ಪದ್ಮನಾಭನ್‌ ಹೇಳಿದ ಕಮರ್ಷಿಯಲ್‌ ಸ್ಟೋರಿ ಸಾಮಾನ್ಯವಾಗಿ ನಾವೆಲ್ಲ ಎಂಟು ದಿಕ್ಕು ಅಂತಾನೋ, ಹತ್ತು ದಿಕ್ಕು ಅಂತಾನೋ ಮಾತಾಡುವುದನ್ನ ಕೇಳಿದ್ದೇವೆ. ಆದರೆ ನಿರ್ದೇಶಕ ದಯಾಳ್‌ ಪದ್ಮನಾಭನ್‌ “ಒಂಬತ್ತನೇ ದಿಕ್ಕು ’ಎನ್ನುವ ಹೊಸ ದಿಕ್ಕನ್ನು ಅನ್ವೇಷಿಸಿ ಅದನ್ನು ತೆರೆಮೇಲೆ ಹೇಳಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

Advertisement

ಹೌದು, ಕಳೆದ ಬಾರಿ “ರಂಗನಾಯಕಿ’ ಚಿತ್ರವನ್ನು ತೆರೆಮೇಲೆ ತಂದಿದ್ದ ದಯಾಳ್‌, ಈ ತಮ್ಮ ಹೊಸ ಚಿತ್ರಕ್ಕೆ “ಒಂಬತ್ತನೇ ದಿಕ್ಕು ’ ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಸದ್ದಿಲ್ಲದೆ ಈ ಚಿತ್ರವನ್ನು ಪೂರ್ಣಗೊಳಿಸಿರುವ ದಯಾಳ್‌, ತಮ್ಮ ಪ್ಲಾನ್‌ ಪ್ರಕಾರ ಇಷ್ಟೊತ್ತಿಗಾಗಲೇ ಆ ಚಿತ್ರವನ್ನು ತೆರೆಗೆ ಕೂಡ ತರಬೇಕಿತ್ತು.

ಇದೊಂದು ಇಂದಿನ ಸ್ಟೈಲ್‌ನ ಪಕ್ಕಾ ಕಮರ್ಶಿಯಲ್‌ ಎಲಿಮೆಂಟ್ಸ್‌ ಇರುವ ಆ್ಯಕ್ಷನ್‌ ಕಂ ಕ್ರೈಂ-ಥ್ರಿಲ್ಲರ್‌ ಸಬ್ಜೆಕ್ಟ್ ಸಿನಿಮಾ. ಅದೇನು ಅನ್ನೋದನ್ನ ಸ್ಕ್ರೀನ್‌ ಮೇಲೆ ನೋಡ್ಬೇಕು. 1 ದಿನದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುವ ಕಥೆಯನ್ನ ಸ್ಕ್ರೀನ್‌ ಮೇಲೆ ಹೇಳಿದ್ದೇವೆ’ ಎಂದು ಚಿತ್ರದ ಕಥಾಹಂದರದ ಬಗ್ಗೆ ವಿವರಣೆ ಕೊಡುತ್ತಾರೆ.

ಚಿತ್ರದಲ್ಲಿ ಲೂಸ್‌ ಮಾದ ಯೋಗಿ, ಅದಿತಿ ಪ್ರಭುದೇವ, ಡೈಲಾಗ್‌ ಕಿಂಗ್‌ ಸಾಯಿಕುಮಾರ್‌, ಸಂಪತ್‌, ಅಶೋಕ್‌, ರಮೇಶ್‌ ಭಟ್‌, ಪ್ರಶಾಂತ್‌ ಸಿದ್ಧಿ ಅಭಿನಯಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next